(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ರೌಡಿ ಕುಣಿಗಲ್ ಗಿರಿ ಸಹಚರರ ಬಂಧನ

ದರೋಡೆಗೆ ಸಜ್ಜಾಗಿ ಕುಳಿತಿದ್ದ ಕುಖ್ಯಾತ ರೌಡಿ ಕುಣಿಗಲ್ ಗಿರಿಯ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ದರೋಡೆಗೆ ಸಜ್ಜಾಗಿ ಕುಳಿತಿದ್ದ ಕುಖ್ಯಾತ ರೌಡಿ ಕುಣಿಗಲ್ ಗಿರಿಯ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕುರುಬರಹಳ್ಳಿ ನಿವಾಸಿ ಪ್ರವೀಣ್ ಕುಮಾರ (27), ಅತ್ತಿಬೆಲೆ ಪಾರ್ವತಿ ನಗರದ ಸುಬ್ರಮಣಿ (26), ಮಧು (21) ಹಾಗೂ ವಿವೇಕ್ (22) ಬಂಧಿತರು. ಶಿವ ಮತ್ತು ಬೆಟ್ಟ ಹೆಸರಿನ ಮತ್ತಿಬ್ಬರು ಆರೋಪಿಗಳು ಪರಾರಿಯಾಗಿ-ದ್ದಾರೆ. ಬಂಧಿತರಿಂದ 2 ದ್ವಿಚಕ್ರ ವಾಹನಗಳು ಮಾರಕಾಸ್ತ್ರಗಳು ಹಾಗೂ 4 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳು ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ನೂರು ಅಡಿ ದೂರದಲ್ಲಿರುವ ನಿರ್ಜನ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳನ್ನು ನಿಂತುಕೊಂಡು ಒಂಟಿಯಾಗಿ ಓಡಾಡುವವರ ಅಡ್ಡಗಟ್ಟಿ ಬೆದರಿಸಿ ಹಣ ಚಿನ್ನಾಭರಣ ದೋಚಲು ಹೊಂಚು ರೂಪಿಸಿದ್ದರು. ಅಲ್ಲದೇ ಎದುರಾಳಿ ಗುಂಪಿನ ವ್ಯಕ್ತಿಯ ಮೇಲೆ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸದ್ಯ ಜೈಲಿನಲ್ಲಿರುವ ರೌಡಿ ಕುಣಿಗಲ್ ಗಿರಿ ಸಹಚರರಾಗಿದ್ದು ದೇಹದಂಧೆ ಅಡ್ಡೆಗಳ ಮೇಲೆ ದಾಳಿ ನಡೆಸಿ ಬೆದರಿಸಿ ಹಣ ಸುಲಿಗೆ ಮಾಡುವ ಪ್ರವೃತ್ತಿ ಹೊಂದಿದ್ದರು. ಇತ್ತೀಚೆಗೆ ಹೊಂಗಸಂದ್ರಲ್ಲಿರುವ ಮನೆಯೊಂದಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ ಬೆದರಿಸಿ ಮಹಿಳೆಯನ್ನು ಬೆದರಿಸಿ ರು.1.5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಮುಖ ಆರೋಪಿ ಪ್ರವೀಣ್ ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು ಹೆಣ್ಣೂರು ಹಾಗೂ ಮಹದೇವಪುರದಲ್ಲಿ ದರೋಡೆ ಯತ್ನ ಹಾಗೂ ದರೋಡೆ ಪ್ರಕರಣಗಳಿವೆ. ಮತ್ತೊಬ್ಬ ಆರೋಪಿ ಮಧು ವಿರುದ್ಧ ಹೆಬ್ಬಗೋಡಿ ಠಾಣೆಯಲ್ಲಿ ಕೊಲೆ ಪ್ರಕರಣವಿದೆ. ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT