ಲೇಖಕ-ವಿಚಾರವಾದಿ ಕೆಎಸ್ ಭಗವಾನ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕೆ ಎಸ್ ಭಗವಾನ್‍ಗೆ ಬೆದರಿಕೆ ಪತ್ರ

ಸಾಹಿತಿ ಹಾಗೂ ವಿಚಾರವಾದಿ ಪ್ರೊ.. ಕೆ.ಎಸ್. ಭಗವಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪತ್ರವೊಂದು ಬುಧವಾರ ಬಂದಿದೆ...

ಮೈಸೂರು: ಸಾಹಿತಿ ಹಾಗೂ ವಿಚಾರವಾದಿ ಪ್ರೊ.. ಕೆ.ಎಸ್. ಭಗವಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪತ್ರವೊಂದು ಬುಧವಾರ ಬಂದಿದೆ. 

ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯ ನಿವಾಸಿಯಾದ ಪ್ರೊ.. ಭಗವಾನ್ ಅವರ ವಿಳಾಸಕ್ಕೆ ಮುಚ್ಚಿದ ಲಕೋಟೆಯಲ್ಲಿ ಟೈಪ್ ಮಾಡಿರುವ ಪತ್ರ ಬಂದಿದೆ. ಆ ಪತ್ರದಲ್ಲಿ ನೆಕ್ಸ್ಟ್  ಟಾರ್ಗೆಟ್ ನೀವೆ.. ಅಲರ್ಟ್ ಆಗಿರಿ ಎಂದಿದೆ. ಬರೆದವರಾರೆಂದು ಪತ್ತೆಯಾಗಿಲ್ಲ.

ಲಕೋಟೆ ಮೇಲೆ ಬೆಂಗಳೂರು 560009 ಅಂಚೆ ಕಚೇರಿಯ ಮುದ್ರೆ ಇದೆ. ಹೀಗಾಗಿ, ಈ ಪತ್ರವು ಬೆಂಗಳೂರಿನಿಂದ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುವೆಂಪುನಗರ ಠಾಣೆ  ಇನ್ಸ್‍ಪೆಕ್ಟರ್ ಜಿ. ಶೇಖರ್ ತನಿಖೆ ಆರಂಭಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಭಗವಾನ್ ಅವರಿಗೆ ನೀಡಲಾಗಿದ್ದ ಭದ್ರತೆ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT