ಲೇಖಕ-ವಿಚಾರವಾದಿ ಕೆಎಸ್ ಭಗವಾನ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕೆ ಎಸ್ ಭಗವಾನ್‍ಗೆ ಬೆದರಿಕೆ ಪತ್ರ

ಸಾಹಿತಿ ಹಾಗೂ ವಿಚಾರವಾದಿ ಪ್ರೊ.. ಕೆ.ಎಸ್. ಭಗವಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪತ್ರವೊಂದು ಬುಧವಾರ ಬಂದಿದೆ...

ಮೈಸೂರು: ಸಾಹಿತಿ ಹಾಗೂ ವಿಚಾರವಾದಿ ಪ್ರೊ.. ಕೆ.ಎಸ್. ಭಗವಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪತ್ರವೊಂದು ಬುಧವಾರ ಬಂದಿದೆ. 

ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯ ನಿವಾಸಿಯಾದ ಪ್ರೊ.. ಭಗವಾನ್ ಅವರ ವಿಳಾಸಕ್ಕೆ ಮುಚ್ಚಿದ ಲಕೋಟೆಯಲ್ಲಿ ಟೈಪ್ ಮಾಡಿರುವ ಪತ್ರ ಬಂದಿದೆ. ಆ ಪತ್ರದಲ್ಲಿ ನೆಕ್ಸ್ಟ್  ಟಾರ್ಗೆಟ್ ನೀವೆ.. ಅಲರ್ಟ್ ಆಗಿರಿ ಎಂದಿದೆ. ಬರೆದವರಾರೆಂದು ಪತ್ತೆಯಾಗಿಲ್ಲ.

ಲಕೋಟೆ ಮೇಲೆ ಬೆಂಗಳೂರು 560009 ಅಂಚೆ ಕಚೇರಿಯ ಮುದ್ರೆ ಇದೆ. ಹೀಗಾಗಿ, ಈ ಪತ್ರವು ಬೆಂಗಳೂರಿನಿಂದ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುವೆಂಪುನಗರ ಠಾಣೆ  ಇನ್ಸ್‍ಪೆಕ್ಟರ್ ಜಿ. ಶೇಖರ್ ತನಿಖೆ ಆರಂಭಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಭಗವಾನ್ ಅವರಿಗೆ ನೀಡಲಾಗಿದ್ದ ಭದ್ರತೆ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT