(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ ಸಾವಿರ ವಿಶೇಷ ಬಸ್

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15 ಮತ್ತು 16ರಂದು ಒಂದು ಸಾವಿರಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ...

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15 ಮತ್ತು 16ರಂದು ಒಂದು ಸಾವಿರಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‍ಗಳ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಕೆಂಗೇರಿಯ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇ ಟಿಕೆಟ್ ಕಾಯ್ದಿರಿಸಲು www.ksrtc.in ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT