(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಟ್ರ್ಯಾಕ್ಟರ್ ಹರಿದು 5 ವರ್ಷದ ಮಗು ಸಾವು

ಟ್ರ್ಯಾಕ್ಟರ್ ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದ ವೇಳೆ ಅದರ ಹಿಂದಿನ ಚಕ್ರ ಹರಿದು ಐದು ವರ್ಷದ ಬಾಲಕ ಶರಣು ಎಂಬಾತ ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಮೀಪದ ಕೊಡಿಗೆಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ...

ಬೆಂಗಳೂರು: ಟ್ರ್ಯಾಕ್ಟರ್ ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದ ವೇಳೆ ಅದರ ಹಿಂದಿನ ಚಕ್ರ ಹರಿದು ಐದು ವರ್ಷದ ಬಾಲಕ ಶರಣು ಎಂಬಾತ ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಮೀಪದ ಕೊಡಿಗೆಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಕಟ್ಟಡ ನಿರ್ಮಾಣ ಕಾರ್ಮಿಕ ದಂಪತಿಯ ಮಗನಾದ ಶರಣು ಕೊಡಿಗೆಹಳ್ಳಿಯಲ್ಲಿ ವಾಸವಾಗಿದ್ದ. ಸಂಜೆ 5ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದ. ಇದೇ ವೇಳೆ ಚಾಲಕ ಬಾಲಾಜಿ, ಟ್ರ್ಯಾಕ್ಟರ್‍ನ್ನು ಪಾರ್ಕ್ ಮಾಡಿದ ಜಾಗದಿಂದ ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದಾಗ ದುರ್ಘಟನೆ ನಡೆದಿದೆ.

ಅಂಬುಲೆನ್ಸ್ ಮೂಲಕ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯಯೇ ಮೃತಪಟ್ಟಿದ್ದ. ಕೆ.ಆರ್ ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT