ಮೇಯರ್ ಮಂಜುನಾಥ ರೆಡ್ಡಿ (ಫೋಟೋ ಕೃಪೆ: ಕೆಪಿಎನ್) 
ಜಿಲ್ಲಾ ಸುದ್ದಿ

ಪಾಲಿಕೆಯಲ್ಲಿ 15 ವರ್ಷದ ಅನುಭವ: ಮೇಯರ್ ಮಂಜುನಾಥ ರೆಡ್ಡಿ

ಮೇಯರ್ ಮಂಜುನಾಥ ರೆಡ್ಡಿ ಕಳೆದ ಬಾರಿಯ ಬಿಬಿಎಂಪಿ ಆಡಳಿತದಲ್ಲಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದರು. 1996ರ ಬಿಬಿಎಂಪಿ ಚುನಾವಣೆಯಲ್ಲಿ ಮಡಿವಾಳ ವಾರ್ಡ್ ನಿಂದ ವಿಜಯ ಸಾಧಿಸಿ ಮೊದಲ ಬಾರಿಗೆ ಪಾಲಿಕೆ ಮೆಟ್ಟಿಲು ಹಿತ್ತದ್ದರು...

ಬೆಂಗಳೂರು: ಮೇಯರ್ ಮಂಜುನಾಥ ರೆಡ್ಡಿ ಕಳೆದ ಬಾರಿಯ ಬಿಬಿಎಂಪಿ ಆಡಳಿತದಲ್ಲಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದರು. 1996ರ ಬಿಬಿಎಂಪಿ ಚುನಾವಣೆಯಲ್ಲಿ ಮಡಿವಾಳ ವಾರ್ಡ್ ನಿಂದ ವಿಜಯ ಸಾಧಿಸಿ ಮೊದಲ ಬಾರಿಗೆ ಪಾಲಿಕೆ ಮೆಟ್ಟಿಲು ಹಿತ್ತದ್ದರು.

ನಂತರ 2001ರಲ್ಲಿ ಹಾಗೂ 2010ರಲ್ಲಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೀಗಾಗಿ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಯಾಗಿ ಅವರಿಗೆ ಒಟ್ಟು 15 ವರ್ಷಗಳ ದೀರ್ಘ ಅನುಭವವಿದೆ.

ರಾಜಕೀಯ ಪಥ: 1983ರಲ್ಲಿ ವಿದ್ಯಾರ್ಥಿ ಸಂಘಟನೆಯಾದ ಎನ್‍ಎಸ್‍ಯುಐ ಮೂಲಕ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ನಂತರ ಪಾಲಿಕೆ
ಸದಸ್ಯ ರಾಗಿ ಆಯ್ಕೆಯಾದಾಗ ಬಿಎಂಪಿಯಲ್ಲಿ ಚುನಾಯಿತ ಸದಸ್ಯರ ಕಾರ್ಯದರ್ಶಿ ಹಾಗೂ ನೇಮಕಾತಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಲೆಕ್ಕಪತ್ರ ಸ್ಥಾಯಿ ಸಮಿತಿಯ ಸದಸ್ಯ, ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿಯ ಸದಸ್ಯ ಹಾಗೂ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬಿಎಂಪಿಯಲ್ಲಿ ವಿರೋಧ ಪಕ್ಷದ ಉಪನಾಯಕ ನಾಗಿಯೂ ಅನುಭವ ಪಡೆದರು.

ಕಾಂಗ್ರೆಸ್ ಪಕ್ಷದಲ್ಲೂ ಮೇಯರ್ ಮಂಜುನಾಥ್ ರೆಡ್ಡಿ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿದ್ದಾರೆ. ಮೊದಲು ರಾಜಕೀಯಕ್ಕೆ ಇಳಿದಾಗ ಜಯನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. 1984ರಿಂದ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ, ರಾಜ್ಯದಲ್ಲಿ ನಡೆದ ಉಪಚುನಾವಣೆ, ವಿಧಾನಪರಿಷತ್, ತಾಲೂಕು ಬೋರ್ಡ್, ಜಿಲ್ಲಾ ಪರಿಷತ್ ಚುನಾವಣೆಗಳಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿದ್ದರು. 2001ರಿಂದ 2006ರವರೆಗಿನ ಅವಧಿಯಲ್ಲಿ ಬಿಬಿಎಂಪಿಯಲ್ಲಿ ಪಕ್ಷದ ವೀಕ್ಷಕರಾಗಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT