ಜಿಲ್ಲಾ ಸುದ್ದಿ

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶ

Lingaraj Badiger

ಬೆಂಗಳೂರು: ಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.

ಕೋರ್ಟ್ ಆದೇಶ ಉಲ್ಲಂಘಿಸಿ ಸರ್ಕಾರಿ ಜಮೀನು ಒತ್ತುವರಿ ಆರೋಪದ ಮೇಲೆ ಜಿಲ್ಲಾಡಳಿತ 2014ರಲ್ಲಿ ಚಿಕ್ಕಲಸಂದ್ರದ ವೆಂಕಟಸ್ವಾಮಿ ಎಂಬುವವರ ಮನೆ ನೆಲಸಮ ಮಾಡಿತ್ತು. ಇದರ ವಿರುದ್ಧ ಮನೆ ಮಾಲೀಕ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಜಿಲ್ಲಾಧಿಕಾರಿ ಕಚೇರಿ ಜಪ್ತಿ ಮಾಡಿ, 18 ಲಕ್ಷ ರುಪಾಯಿ ಮೌಲ್ಯದ ವಸ್ತುಗಳನ್ನು ಪಡೆಯಲು ಆದೇಶ ನೀಡಿದೆ.

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಸಿಬ್ಬಂದಿ ಹಾಗೂ ವಕೀಲರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂತ್ರಸ್ತರು, ಕಚೇರಿಯ ಎರಡು ಇನ್ನೊವಾ ಕಾರು ಹಾಗೂ 40 ಕಂಪ್ಯೂಟರ್‌ಗಳನ್ನು ಜಪ್ತಿ ಮಾಡಿದ್ದಾರೆ.

SCROLL FOR NEXT