(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನಿವೇಶನ ಹಂಚಿಕೆ ಅವ್ಯವಹಾರ ನಡೆದಿಲ್ಲ: ಸಿ.ಎಂ. ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡಲು ಬಿಡಿಎ 3 ಎಕರೆ ಜಮೀನು ನೀಡಿದ್ದರೂ ನಿವೇಶನ ನೀಡಿಲ್ಲ ಎಂದು ಸಂಘದ ಕಾರ್ಯದರ್ಶಿಯಾಗಿದ್ದ...

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡಲು ಬಿಡಿಎ 3 ಎಕರೆ ಜಮೀನು ನೀಡಿದ್ದರೂ ನಿವೇಶನ ನೀಡಿಲ್ಲ ಎಂದು ಸಂಘದ ಕಾರ್ಯದರ್ಶಿಯಾಗಿದ್ದ ಬಿ.ಎಂ.ಚಿಕ್ಕಯ್ಯ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಸಂಘದ ಅಧ್ಯಕ್ಷ ಸಿ.ಎಂ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

ಬಿಡಿಎ ನೌಕರರ ಕಲ್ಯಾಣ ಸಂಘ 42 ಎಕರೆ ಜಮೀನಿನಲ್ಲಿ 2008ರಿಂದ 2010ರವರೆಗೆ ಬಡಾವಣೆಗಳನ್ನು ನಿರ್ಮಿಸಿ ಪ್ರಾಧಿಕಾರದ ಎಲ್ಲ ಹಾಲಿ ನೌಕರರಿಗೆ ನಿವೇಶನ ಹಂಚಿಕೆ ಮಾಡಿದೆ. ಉಳಿದ 3 ಎಕರೆ ಜಮೀನಿನಲ್ಲಿ ನಿವೃತ್ತ ನೌಕರರಿಗೆ ಹಂಚಿಕೆ ಮಾಡಲು  ನಿರ್ಧರಿಸಲಾಗಿದೆ. ಆದರೆ ಬಿ.ಎಂ.ಚಿಕ್ಕಯ್ಯ ಅವರು ಸುಮಾರು 61 ಮಂದಿ ನಿವೃತ್ತ ನೌಕರರಿಂದ ರು.3ರಿಂದ 4 ಲಕ್ಷ ವಸೂಲು ಮಾಡಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ಮಧ್ಯ ನ್ಯಾಯಾಲಯದಲ್ಲಿ ಸಂಘದ ವಿರುದಟಛಿ ದಾವೆ ಹೂಡಿದ್ದು, ಮಾತುಕತೆ ಬಳಿಕ ದಾವೆ ವಾಪಸ್ ಪಡೆದಿದ್ದರು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಹಣ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲಾಗಿದೆ. ನಿವೃತ್ತ ನೌಕರರಿಗೆ 3 ರಿಂದ 4 ಎಕರೆ ಜಮೀನು ಬಿಡುಗಡೆ ಮಾಡಿ ಎಲ್ಲರಿಗೂ ಹಂಚಿಕೆ ಮಾಡುವುದಾಗಿ ಬಿಡಿಎ ಆಯಕ್ತರೇ ಭರವಸೆ ನೀಡಿದ್ದಾರೆ. ಈ ಮಧ್ಯೆ ಚಿಕ್ಕಯ್ಯನವರು ಸುಳ್ಳು ಆರೋಪ ಮಾಡಿ ಸಂಘದ ಗೌರವಕ್ಕೆ ಚ್ಯುತಿ ತಂದಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ