ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಕಲ್ಬುರ್ಗಿ ಹಂತಕರ ಸುಳಿವು ನೀಡಿದರೆ 5 ಲಕ್ಷ ಬಹುಮಾನ

ಹಿರಿಯ ಸಂಶೋಧಕ ಹಾಗೂ ಖ್ಯಾತ ಸಾಹಿತಿ ಎಂ.ಎಂ. ಕಲಬುರಗಿ ಹತ್ಯೆಗೆ ಸಂಬಂಧಿಸಿದಂತೆ ಹಂತಕರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ....

ಬೆಂಗಳೂರು: ಹಿರಿಯ ಸಂಶೋಧಕ ಹಾಗೂ ಖ್ಯಾತ ಸಾಹಿತಿ ಎಂ.ಎಂ. ಕಲಬುರಗಿ ಹತ್ಯೆಗೆ ಸಂಬಂಧಿಸಿದಂತೆ ಹಂತಕರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ  ಕೃಷ್ಣಾದಲ್ಲಿ ನಡೆದ ಜನತಾ ದರ್ಶನ ವೇಳೆ, ತಮ್ಮನ್ನು ಭೇಟಿ ಮಾಡಿದ ಸ್ವಾಮೀಜಿಗಳು ಹಾಗೂ ಕವಿಗಳ ಸಮೂಹಕ್ಕೆ ಸಿಎಂ ಸಿದ್ದರಾಮಯ್ಯ ಈ ಭರವಸೆ ನೀಡಿದರು. ಕಲ್ಬುರ್ಗಿ ಅವರ ಹತ್ಯೆಯಾಗಿ 15 ದಿನಗಳಾದರೂ ಇದುವರೆಗೂ ಹಂತಕರ ಪತ್ತೆಯಾಗದ ಹಿನ್ನೆಲೆಯಲ್ಲಿ, ಇಂದು ಪ್ರಗತಿ ಪರ ಚಿಂತಕರು ಹಾಗೂ ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂಶೋಧಕ ಡಾ. ಕಲ್ಬುರ್ಗಿ ಅವರ ಹತ್ಯೆ ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ಇನಾಮು ಕೊಡುವುದಾಗಿ ತಿಳಿಸಿದ ಅವರು ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡುವುದಾಗಿ ಹೇಳಿದರು.ಪ್ರಕರಣ ಸಂಬಂಧ ಸಿಐಡಿ ಹಾಗೂ ಪೊಲೀಸರ ತನಿಖೆ ಮುಂದುವರಿದಿದ್ದು ಇದುವರೆಗೂ ಯಾವುದೇ ಗಮನಾರ್ಹ ಮಾಹಿತಿ ತಿಳಿದು ಬಂದಿಲ್ಲ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT