ವಾಹನ ದಟ್ಟಣೆ (ಕೃಪೆ :ಕೆಪಿಎನ್) 
ಜಿಲ್ಲಾ ಸುದ್ದಿ

ಗಣೇಶ ಹಬ್ಬಕ್ಕೆ ಟ್ರಾಫಿಕ್ ಜಾಮ್

ಆಷಾಢದ ನಂತರದ ಮೊದಲ ಪ್ರಮುಖ ಹಬ್ಬವಾದ ಗೌರಿ-ಗಣೇಶ ಹಬ್ಬಕ್ಕೆ ಬುಧವಾರ ನಗರದಾದ್ಯಂತ ಟ್ರಾಫಿಕ್ ಜಾಮ್ ಕಂಡುಬಂದಿತು. ಗುರುವಾರ...

ಬೆಂಗಳೂರು: ಆಷಾಢದ ನಂತರದ ಮೊದಲ ಪ್ರಮುಖ ಹಬ್ಬವಾದ ಗೌರಿ-ಗಣೇಶ ಹಬ್ಬಕ್ಕೆ ಬುಧವಾರ ನಗರದಾದ್ಯಂತ ಟ್ರಾಫಿಕ್ ಜಾಮ್ ಕಂಡುಬಂದಿತು. ಗುರುವಾರ ಸಾರ್ವತ್ರಿಕ ರಜೆ ಇರುವುದರಿಂದ, ಹಬ್ಬದ ಖರೀದಿ ಹಾಗೂ ಹೊರ ಊರುಗಳಿಗೆ ಪ್ರಯಾಣಿಸುವವರಿಂದಾಗಿ ನಗರದ ಪ್ರಮುಖ ರಸ್ತೆಗಳು ವಾಹನ ಹಾಗೂ ಜನರಿಂದ ಕಿಕ್ಕಿರಿದವು. ಪ್ರಯಾಣಿಕರ ದಟ್ಟಣೆ ತಗ್ಗಿಸಲೆಂದೇ ಕೆಎಸ್‍ಆರ್‍ಟಿಸಿ ಒಂದು ಸಾವಿರ ಹೆಚ್ಚುವರಿ ಬಸ್‍ಗಳನ್ನು ಬಿಟ್ಟಿದ್ದರಿಂದಲೂ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ದಟ್ಟಣೆಯಿ ದ್ದರೆ, ಶಾಂತಿನಗರ, ಪೀಣ್ಯ ಹಾಗೂ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣಗಳು ಕೂಡ ಪರಿಸ್ಥಿತಿಯಿಂದ ಹೊರತಾಗಿರಲಿಲ್ಲ. ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿಬಜಾರ್, ವಿಜಯನಗರದ ಮಾರು ಕಟ್ಟೆಗಳಲ್ಲಿ ಹಬ್ಬದ ಖರೀದಿ ಜೋರಾಗಿತ್ತು. ಇದರಿಂದಾಗಿ ಟ್ರಾಪಿsಕ್ ಇನ್ನಷ್ಟು ನಿಧಾನಗತಿಗೆ ಇಳಿಯಿತು. ಇದರ ಜತೆಗೆ ನಗರದ ಪ್ರಮುಖ ಪ್ರದೇಶಗಳಲ್ಲಿ ಗಣೇಶನನ್ನು ಕೂರಿಸುವ ಸಿದ್ಧತೆ ನಡೆದಿರುವುದು ದಟ್ಟಣೆಗೆ ಕಾರಣವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT