ಹೆಚ್.ಡಿ ದೇವೇಗೌಡ 
ಜಿಲ್ಲಾ ಸುದ್ದಿ

ನ್ಯಾಯಾಧಿಕರಣದಿಂದ ಶೀಘ್ರ ಇತ್ಯರ್ಥ ಅಸಾಧ್ಯ

ಕಳಸಾ-ಬಂಡೂರಿ ಕಾಮಗಾರಿ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೆ.18 ರಂದು ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.

ಖಾನಾಪುರ: ಕಳಸಾ-ಬಂಡೂರಿ ಕಾಮಗಾರಿ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೆ.18 ರಂದು ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.

ಕಣಕುಂಬಿಗೆ ತೆರಳಿ ಯೋಜನೆಯ ಕಾಮಗಾರಿ ಸ್ಥಿತಿಗತಿ ವೀಕ್ಷಿಸಿದ ದೇವೇಗೌಡರು ಕರ್ನಾಟಕ ನೀರಾವರಿ ನಿಗಮ ಉಪವಿಭಾಗ ಕಾರ್ಯ ನಿರ್ವಾಹಕ ಅಧಿಕಾರಿ ಮಧುಕರ ಅವರಿಂದ ಸವಿಸ್ತಾರ ಮಾಹಿತಿ ಪಡೆದುಕೊಂಡರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು, ಗೋವಾ ಮತ್ತು ಕರ್ನಾಟಕ ಸರ್ಕಾರ ಒಂದೆಡೆ ಕುಳಿತು ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಗೋವಾ ಸರ್ಕಾರ ಕೃಷಿಗಿಂತ ಮೀನು ಸಂತತಿ ಬಗ್ಗೆ ಮಾತನಾಡುತ್ತಿದೆ. ಗೋವಾ ಕೂಡ ನಮ್ಮ ಸಹೋದರ ರಾಜ್ಯ. ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಎರಡು ರಾಜ್ಯಗಳು ಒಟ್ಟಾಗಿ ಕುಳಿತು ಚರ್ಚೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಇದಕ್ಕೂ ಮುನ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು, ಕಳಸಾ-ಬಂಡೂರಿ ವಿವಾದ ನ್ಯಾಯಾಧಿಕರಣದಲ್ಲಿದೆ. ಇದರಿಂದಾಗಿ ಸಮಸ್ಯೆ ಇತ್ಯರ್ಥ ವಿಳಂಬವಾಗಬಹುದು. ಹಾಗಾಗಿ ಪ್ರಧಾನಮಂತ್ರಿ ತುರ್ತಾಗಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ನಾನೂ ಖುದ್ದಾಗಿ ಪ್ರಧಾನಿಯವರನ್ನು ಭೇಟಿ ಮಾಡಿ ಸಮಸ್ಯೆ ತೀವ್ರತೆ ಮನವರಿಕೆ ಮಾಡಿಕೊಡುವೆ ಎಂದರು.

ಯಡಿಯೂರಪ್ಪ ಪ್ರಧಾನಿ ಮೋದಿ ಮನವೊಲಿಸಲಿ: ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ಈಗ ನಾವೇ ಯಡಿಯೂರಪ್ಪ ಅವರಿಗೆ ನಾಯಕತ್ವ ಕೊಡ್ತೀವಿ. ಮಹದಾಯಿ ಯೋಜನೆ ವ್ಯಾಪ್ತಿಯ ಜನರಿಗೆ ಅಗತ್ಯವಿರುವ 7.5 ಟಿಎಂಸಿ ನೀರನ್ನು ತಾತ್ಕಾಲಿಕವಾಗಿ ದೊರಕಿಸಿಕೊಡಲು ಪ್ರಧಾನಿಯನ್ನು ಮನವೊಲಿಸಲ್ಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ