ಹೆಚ್.ಡಿ ದೇವೇಗೌಡ 
ಜಿಲ್ಲಾ ಸುದ್ದಿ

ನ್ಯಾಯಾಧಿಕರಣದಿಂದ ಶೀಘ್ರ ಇತ್ಯರ್ಥ ಅಸಾಧ್ಯ

ಕಳಸಾ-ಬಂಡೂರಿ ಕಾಮಗಾರಿ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೆ.18 ರಂದು ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.

ಖಾನಾಪುರ: ಕಳಸಾ-ಬಂಡೂರಿ ಕಾಮಗಾರಿ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೆ.18 ರಂದು ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.

ಕಣಕುಂಬಿಗೆ ತೆರಳಿ ಯೋಜನೆಯ ಕಾಮಗಾರಿ ಸ್ಥಿತಿಗತಿ ವೀಕ್ಷಿಸಿದ ದೇವೇಗೌಡರು ಕರ್ನಾಟಕ ನೀರಾವರಿ ನಿಗಮ ಉಪವಿಭಾಗ ಕಾರ್ಯ ನಿರ್ವಾಹಕ ಅಧಿಕಾರಿ ಮಧುಕರ ಅವರಿಂದ ಸವಿಸ್ತಾರ ಮಾಹಿತಿ ಪಡೆದುಕೊಂಡರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು, ಗೋವಾ ಮತ್ತು ಕರ್ನಾಟಕ ಸರ್ಕಾರ ಒಂದೆಡೆ ಕುಳಿತು ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಗೋವಾ ಸರ್ಕಾರ ಕೃಷಿಗಿಂತ ಮೀನು ಸಂತತಿ ಬಗ್ಗೆ ಮಾತನಾಡುತ್ತಿದೆ. ಗೋವಾ ಕೂಡ ನಮ್ಮ ಸಹೋದರ ರಾಜ್ಯ. ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಎರಡು ರಾಜ್ಯಗಳು ಒಟ್ಟಾಗಿ ಕುಳಿತು ಚರ್ಚೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಇದಕ್ಕೂ ಮುನ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು, ಕಳಸಾ-ಬಂಡೂರಿ ವಿವಾದ ನ್ಯಾಯಾಧಿಕರಣದಲ್ಲಿದೆ. ಇದರಿಂದಾಗಿ ಸಮಸ್ಯೆ ಇತ್ಯರ್ಥ ವಿಳಂಬವಾಗಬಹುದು. ಹಾಗಾಗಿ ಪ್ರಧಾನಮಂತ್ರಿ ತುರ್ತಾಗಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ನಾನೂ ಖುದ್ದಾಗಿ ಪ್ರಧಾನಿಯವರನ್ನು ಭೇಟಿ ಮಾಡಿ ಸಮಸ್ಯೆ ತೀವ್ರತೆ ಮನವರಿಕೆ ಮಾಡಿಕೊಡುವೆ ಎಂದರು.

ಯಡಿಯೂರಪ್ಪ ಪ್ರಧಾನಿ ಮೋದಿ ಮನವೊಲಿಸಲಿ: ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ಈಗ ನಾವೇ ಯಡಿಯೂರಪ್ಪ ಅವರಿಗೆ ನಾಯಕತ್ವ ಕೊಡ್ತೀವಿ. ಮಹದಾಯಿ ಯೋಜನೆ ವ್ಯಾಪ್ತಿಯ ಜನರಿಗೆ ಅಗತ್ಯವಿರುವ 7.5 ಟಿಎಂಸಿ ನೀರನ್ನು ತಾತ್ಕಾಲಿಕವಾಗಿ ದೊರಕಿಸಿಕೊಡಲು ಪ್ರಧಾನಿಯನ್ನು ಮನವೊಲಿಸಲ್ಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT