ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನೈಸ್ ಟೋಲ್ ನಿರ್ಧಾರ ಮುಂದಿನ ಸಭೆಯಲ್ಲಿ

ನೈಸ್ ರಸ್ತೆ ಅವ್ಯವಹಾರ ಕುರಿತಂತೆ ರಚಿಸಿರುವ ಸದನ ಸಮಿತಿಯು ವರದಿ ಸಲ್ಲಿಕೆಗೆ ಇನ್ನೂ ಮೂರು ತಿಂಗಳು ಕಾಲಾವಕಾಶ...

ಬೆಂಗಳೂರು: ನೈಸ್ ರಸ್ತೆ ಅವ್ಯವಹಾರ ಕುರಿತಂತೆ ರಚಿಸಿರುವ ಸದನ ಸಮಿತಿಯು ವರದಿ ಸಲ್ಲಿಕೆಗೆ ಇನ್ನೂ ಮೂರು ತಿಂಗಳು ಕಾಲಾವಕಾಶ ವಿಸ್ತರಿಸುವಂತೆ ಕೋರಲು ನಿರ್ಧರಿಸಿದೆ. ಅದೇ ರೀತಿ, ವಾಹನಗಳಿಂದ ಟೋಲ್ ಸಂಗ್ರಹ ಮಾಡಬೇಕೇ ಬೇಡವೇ ಎಂಬ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧರಿಸಲು ಸಮಿತಿ ತೀರ್ಮಾನಿಸಿದೆ.

ಶನಿವಾರ ವಿಧಾನಸೌಧದಲ್ಲಿ ಸದನ ಸಮಿತಿ ಸಭೆಯ ನಂತರ ಅನೌಪಚಾರಿಕವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ನೈಸ್ ರಸ್ತೆ ಅವ್ಯವಹಾರ ಕುರಿತಾಗಿ ವಿಧಾನಮಂಡಲದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ನಂತರ ಅವ್ಯವಹಾರ ಕುರಿತು ವಸ್ತುಸ್ಥಿತಿ ಅರಿಯಲು ಸದನ ಸಮಿತಿ ರಚಿಸಲಾಗಿತ್ತು.

ಈಗಾಗಲೇ ಸಮಿತಿಯು 15 ಸಭೆ ನಡೆಸಿದೆ ಎಂದರು. ಮಿತಿಗೆ ನೀಡಿದ ಕಾಲಾವಕಾಶ ಈ ತಿಂಗಳಾಂತ್ಯಕ್ಕೆ ಕೊನೆಯಾಗುತ್ತಿದೆ. ಆದರೆ, ವರದಿಯನ್ನು ಪೂರ್ಣಗೊಳಿಸುವ ಉದ್ದೇಶದಿಂದ ಇನ್ನೂ ಮೂರು ತಿಂಗಳು ಅವಧಿ ವಿಸ್ತರಿಸುವಂತೆ ಸದನವನ್ನು ಕೋರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಇನ್ನು ಮೂರು-ನಾಲ್ಕು ಸಭೆಯಲ್ಲಿಯೇ ವರದಿ ಅಂತಿಮಗೊಳಿಸಿ ಸ್ಪೀಕರ್ ಅವರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಇನ್ನೊಂದೆಡೆ ಹೈಕೋರ್ಟ್‍ನ ವಿಶ್ರಾಂತ ನ್ಯಾ.ನಾಗಮೋಹನ್ ದಾಸ್ ಅವರನ್ನು ಸಲಹೆಗಾರರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT