ಕಡಿದಾಳ್ ಶಾಮಣ್ಣ 
ಜಿಲ್ಲಾ ಸುದ್ದಿ

ದಸರಾ ಉದ್ಘಾಟನೆಗೆ ಕಡಿದಾಳ್ ನಿರಾಕರಣೆ

ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ್ದ ಆಹ್ವಾನವನ್ನು ರೈತ ನಾಯಕ ಕಡಿದಾಳ್ ಶಾಮಣ್ಣ...

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ್ದ ಆಹ್ವಾನವನ್ನು ರೈತ ನಾಯಕ ಕಡಿದಾಳ್ ಶಾಮಣ್ಣ ನಿರಾಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಕರೆ ಮಾಡಿ ಆಹ್ವಾನ ನೀಡಿದ್ದರು.

 ಭೀಕರ ಬರದ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಬೇಕು, ¨ಜತೆಗೆ ಪ್ರಗತಿಪರ ರೈತರಿಂದ ದಸರಾ ಉದ್ಘಾಟಿಸಬೇಕು ಎಂದು ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನೇತೃತ್ವದ
ದಸರಾ ಸಮಿತಿ ನಿರ್ಧರಿಸಿತ್ತು.

ಎಲ್ಲೆಡೆ ಬರ ಪರಿಸ್ಥಿತಿ ಇದೆ. ರೈತರ ಆತ್ಮಹತ್ಯೆಗಳು ನಡೆಯುತ್ತಿವೆ. ಕಳಸಾ ಬಂಡೂರಿ ಯೋಜನೆಗಾಗಿ ಹೋರಾಟ ನಡೆಯುತ್ತಿದೆ.ಇಂತಹ ಸಂದರ್ಭದಲ್ಲಿ ಮೈಸೂರಿಗೆ ಹೋಗಿ ಉತ್ಸವ ಉದ್ಘಾಟನೆ ಮಾಡೋದು ಸೂಕ್ಷ್ಮ ವಿಚಾರ. ಸಿದ್ದರಾಮಯ್ಯ ಬಗ್ಗೆ ಗೌರವ ಇದೆ. ಆದರೆ, ಈ ಕಾರಣಗಳಿಂದ ಆಹ್ವಾನ ಒಪ್ಪಿಕೊಳ್ಳುವುದಿಲ್ಲ ಎಂದು ಶಾಮಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT