ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವೈದ್ಯರ ಶಿಷ್ಯವೇತನ ಪರಿಷ್ಕರಣೆಗೆ ಸಂಪುಟ ಅಸ್ತು

ರಾಜ್ಯದ ಸ್ವಾಯತ್ತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಣೆ ಜತೆಗೆ...

ಬೆಂಗಳೂರು: ರಾಜ್ಯದ ಸ್ವಾಯತ್ತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಣೆ ಜತೆಗೆ ಉನ್ನತ ವ್ಯಾಸಂಗ ನಡೆಸುವ ವೈದ್ಯರ ಶಿಷ್ಯವೇತನ ಪರಿಷ್ಕರಣೆಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ವೈದ್ಯರ ಮುಷ್ಕರ ಸಂದರ್ಭದಲ್ಲಿ ಸರ್ಕಾರ ನೀಡಿದ ಈ ಭರವಸೆ ಈಡೇರಿಸಬೇಕು ಎಂದು ಕೆಲ ಸಚಿವರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನಿವಾರ್ಯವಾಗಿ ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಶಿಷ್ಯವೇತನ ಪರಿಷ್ಕರಣೆಯಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ಈ ಪರಿಶೀಲನೆ ಸೂಕ್ತ ಎಂಬರ್ಥದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಹಲವರು ಶಿಷ್ಯವೇತನ ಪರಿಷ್ಕರಣೆ ಬಗ್ಗೆ ಪಟ್ಟು ಹಿಡಿದರು.

ಹೀಗಾಗಿ ಎಂಬಿಬಿಎಸ್ ವಿದ್ಯಾರ್ಥಿಗಳ ಶಿಷ್ಯ ವೇತನ ಮೊದಲ ವರ್ಷ 15 ಸಾವಿರದಿಂದ 20 ಸಾವಿರಕ್ಕೆ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮೊದಲ ವರ್ಷ 25 ಸಾವಿರದಿಂದ 30 ಸಾವಿರಕ್ಕೆ 2ನೇ ವರ್ಷ 35 ಸಾವಿರ, ಮೂರನೇ ವರ್ಷ 40 ಸಾವಿರ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸ್ನಾತಕೋತ್ತರ ವೈದ್ಯರ ಶಿಷ್ಯ ವೇತನ 30 ಸಾವಿರದಿಂದ 40 ಸಾವಿರ, 2ನೇ ವರ್ಷ 45 ಸಾವಿರ, 3ನೇ ವರ್ಷ 50 ಸಾವಿರ ಹೆಚ್ಚಳವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT