ಗೋವಿಂದ ಪಾನ್ಸರೆ 
ಜಿಲ್ಲಾ ಸುದ್ದಿ

ಪಾನ್ಸರೆ ಪ್ರಕರಣ ಮರೆತೇ ಬಿಟ್ಟಿದ್ದ ಮಹಾ ಪೊಲೀಸರು

ವಿಚಾರವಾದಿ ಗೋವಿಂದ ಪಾನ್ಸರೆ ಕೊಲೆ ಪ್ರಕರಣವನ್ನು ಮರೆತೇ ಬಿಟ್ಟಿದ್ದ ಮಹಾರಾಷ್ಟ್ರ ಪೊಲೀಸರು, ಡಾ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರ...

ಮುಂಬೈ: ವಿಚಾರವಾದಿ ಗೋವಿಂದ ಪಾನ್ಸರೆ ಕೊಲೆ ಪ್ರಕರಣವನ್ನು ಮರೆತೇ ಬಿಟ್ಟಿದ್ದ ಮಹಾರಾಷ್ಟ್ರ ಪೊಲೀಸರು, ಡಾ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರ ತನಿಖೆಯ ಮುನ್ನಡೆಯಿಂದ ಎಚ್ಚೆತ್ತು ಆರೋ ಪಿಯನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಇಂಥ ಟೀಕೆ ವ್ಯಕ್ತವಾಗಿದ್ದು, ಕರ್ನಾಟಕ ಪೊಲೀಸರ ತನಿಖೆ ಮುನ್ನಡೆ ಬಳಿಕವಷ್ಟೆ ಮಹಾರಾಷ್ಟ್ರ ಪೊಲೀಸರು ಪಾನ್ಸರೆ ಕೊಲೆ ಆರೋಪಿ ಗಾಯಕವಾಡ ನನ್ನು ಬಂಧಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಲ್ಲದೆ, ಸನಾತನ ಸಂಸ್ಥೆ ವಿರುದ್ಧ ತನಿಖೆಯ ದಿಕ್ಕುತಪ್ಪಿಸಲು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದೂ ಆಕ್ರೋಶ ವ್ಯಕ್ತಪಡಿಸಿದೆ. ಸಿಪಿಐ ನಾಯಕ, ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಕಳೆದ ವಾರ ಸನಾತನ ಸಂಸ್ಥೆ ಸದಸ್ಯ ಸಮೀರ್ ಗಾಯಕವಾಡ್‍ನನ್ನು ಬಂಧಿಸಿದ್ದಾರೆ. ಡಾ.ಕಲಬುರ್ಗಿ ಹತ್ಯೆ ಸಂಬಂಧ ಕರ್ನಾಟಕ ಪೊಲೀಸರು ಸನಾತನ ಸಂಸ್ಥೆಯ ಕೈವಾಡ ಶಂಕಿಸಿ ಕೊಲ್ಹಾಪುರ ಹಾಗೂ ಸಾಂಗ್ಲಿಯಲ್ಲಿ ತನಿಖೆ ಕೈಗೊಂಡಿದ್ದರು. ಈ ತನಿಖೆ ವೇಳೆ ದೊರೆತ ಮಹತ್ವದ ಸುಳಿವಿನ ಬಳಿಕವಷ್ಟೇ ಮಹಾ ಪೊಲೀಸರು ಪಾನ್ಸರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!

ಮತದಾರರ ಪಟ್ಟಿಯಿಂದ 84 ಲಕ್ಷ ಹೆಸರು ಡಿಲೀಟ್? ಸ್ಪಷ್ಟನೆ ಕೊಟ್ಟ CEO, ಹೇಳಿದ್ದೇನು..?

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!