ಗೋವಿಂದ ಪಾನ್ಸರೆ 
ಜಿಲ್ಲಾ ಸುದ್ದಿ

ಪಾನ್ಸರೆ ಪ್ರಕರಣ ಮರೆತೇ ಬಿಟ್ಟಿದ್ದ ಮಹಾ ಪೊಲೀಸರು

ವಿಚಾರವಾದಿ ಗೋವಿಂದ ಪಾನ್ಸರೆ ಕೊಲೆ ಪ್ರಕರಣವನ್ನು ಮರೆತೇ ಬಿಟ್ಟಿದ್ದ ಮಹಾರಾಷ್ಟ್ರ ಪೊಲೀಸರು, ಡಾ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರ...

ಮುಂಬೈ: ವಿಚಾರವಾದಿ ಗೋವಿಂದ ಪಾನ್ಸರೆ ಕೊಲೆ ಪ್ರಕರಣವನ್ನು ಮರೆತೇ ಬಿಟ್ಟಿದ್ದ ಮಹಾರಾಷ್ಟ್ರ ಪೊಲೀಸರು, ಡಾ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರ ತನಿಖೆಯ ಮುನ್ನಡೆಯಿಂದ ಎಚ್ಚೆತ್ತು ಆರೋ ಪಿಯನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಇಂಥ ಟೀಕೆ ವ್ಯಕ್ತವಾಗಿದ್ದು, ಕರ್ನಾಟಕ ಪೊಲೀಸರ ತನಿಖೆ ಮುನ್ನಡೆ ಬಳಿಕವಷ್ಟೆ ಮಹಾರಾಷ್ಟ್ರ ಪೊಲೀಸರು ಪಾನ್ಸರೆ ಕೊಲೆ ಆರೋಪಿ ಗಾಯಕವಾಡ ನನ್ನು ಬಂಧಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಲ್ಲದೆ, ಸನಾತನ ಸಂಸ್ಥೆ ವಿರುದ್ಧ ತನಿಖೆಯ ದಿಕ್ಕುತಪ್ಪಿಸಲು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದೂ ಆಕ್ರೋಶ ವ್ಯಕ್ತಪಡಿಸಿದೆ. ಸಿಪಿಐ ನಾಯಕ, ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಕಳೆದ ವಾರ ಸನಾತನ ಸಂಸ್ಥೆ ಸದಸ್ಯ ಸಮೀರ್ ಗಾಯಕವಾಡ್‍ನನ್ನು ಬಂಧಿಸಿದ್ದಾರೆ. ಡಾ.ಕಲಬುರ್ಗಿ ಹತ್ಯೆ ಸಂಬಂಧ ಕರ್ನಾಟಕ ಪೊಲೀಸರು ಸನಾತನ ಸಂಸ್ಥೆಯ ಕೈವಾಡ ಶಂಕಿಸಿ ಕೊಲ್ಹಾಪುರ ಹಾಗೂ ಸಾಂಗ್ಲಿಯಲ್ಲಿ ತನಿಖೆ ಕೈಗೊಂಡಿದ್ದರು. ಈ ತನಿಖೆ ವೇಳೆ ದೊರೆತ ಮಹತ್ವದ ಸುಳಿವಿನ ಬಳಿಕವಷ್ಟೇ ಮಹಾ ಪೊಲೀಸರು ಪಾನ್ಸರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT