ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಎಟಿಎಂ ದೋಚಲು ಬಂದು ಸೆರೆಯಾದ

ದುಷ್ಕರ್ಮಿಗಳು ಎಟಿಎಂ ಕೇಂದ್ರಗಳಿಗೆ ನುಗ್ಗಿ ಹಣ ದೋಚಿ, ಕಾವಲುಗಾರರನ್ನು ಕೊಲೆ ಮಾಡಿ ಹೋದ ಹಲವು ಸುದ್ದಿಗಳನ್ನು ಓದಿದ್ದೇವೆ....

ಬೆಂಗಳೂರು: ದುಷ್ಕರ್ಮಿಗಳು ಎಟಿಎಂ ಕೇಂದ್ರಗಳಿಗೆ ನುಗ್ಗಿ ಹಣ ದೋಚಿ, ಕಾವಲುಗಾರರನ್ನು ಕೊಲೆ ಮಾಡಿ ಹೋದ ಹಲವು ಸುದ್ದಿಗಳನ್ನು ಓದಿದ್ದೇವೆ. ಆದರೆ, ಇಲ್ಲೊಬ್ಬ ಕಾವಲುಗಾರ ಎಟಿಎಂ ದರೋಡೆ ಸಂಚನ್ನು ವಿಫಲಗೊಳಿಸಿದ್ದೂ ಅಲ್ಲದೆ, ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಜ್ಞಾನಭಾರತಿ ಸಮೀಪದ ತಿಗಳರಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ನಂದಿನಿ ಬಡಾವಣೆ ಸಮೀಪದ ಕಂಠೀರವ ನಗರ ನಿವಾಸಿ ಚಂದ್ರ(30) ಬಂಧಿತ ಆರೋಪಿ.

ನಸುಕಿನ 2.45ರ ಸುಮಾರಿಗೆ ತಿಗಳರಪಾಳ್ಯದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂ ಒಳಗೆ ಕಟ್ಟಿಂಗ್ ಪ್ರಯರ್ ಸಮೇತ ನುಗ್ಗಿದ ಆರೋಪಿ, ಹಣ ದೋಚಲು ಎಟಿಎಂಗೆ ಕೈ ಹಾಕಿದ್ದಾನೆ. ಆದರೆ, ಎಟಿಎಂ ಕೇಂದ್ರದ ಒಳಗಿನ ಬ್ಯಾಟರಿ ಕ್ಯಾಬಿನ್‌ನಲ್ಲಿ ಮಲಗಿದ್ದ ಕಾವಲುಗಾರ ಲೋಕೇಶ್‌ಗೆ, ಸದ್ದು ಕಿವಿಗೆ ಬಿದ್ದಿತು. ಕೂಡಲೇ ಎಚ್ಚರಗೊಂಡ ಕಾವಲುಗಾರ ಲೋಕೇಶ್ ಚಂದ್ರನ ಮೇಲೆರಗಿ ಹಿಡಿದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ತಾವರೆಕೆರೆ ಪೊಲೀಸರನ್ನು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕುಣಿಗಲ್ ತಾಲೂಕಿನ ಸಿಂಗವನಹಳ್ಳಿ ಗ್ರಾಮದ ಆರೋಪಿ ಚಂದ್ರ, ಪತ್ನಿ ಹಾಗೂ ಮಕ್ಕಳೊಂದಿಗೆ ಕಂಠೀರವ ನಗರದಲ್ಲಿ ವಾಸವಿದ್ದು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ. ವೈಯಕ್ತಿಕ ಕಾರಣಗಳಿಗಾಗಿ 12 ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಹೀಗಾಗಿ ಸಾಲ ತೀರಿಸಲು ಎಟಿಎಂ ದೋಚುವ ಸಂಚು ರೂಪಿಸಿದ್ದ ಎಂದು ಪೊಲೀಸ್ ವಿಚಾರಣೆ ವೇಳೆ ಚಂದ್ರ ಹೇಳಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT