ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಅ.1ರಿಂದ ಸರಕು ಲಾರಿಗಳ ಮುಷ್ಕರ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ...

ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ಖಂಡಿಸಿ ಹಾಗೂ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.1ರಿಂದ ರಾಷ್ಟ್ರವ್ಯಾಪಿ ಸರಕು ಸಾಗಣೆ ವಾಹನಗಳು ಮುಷ್ಕರ ನಡೆಸಲಿವೆ ಎಂದು ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಆ್ಯಂಡ್ ಏಜೆಂಟ್ಸ್ ಅಸೋಸಿಯೇಷ ನ್' ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿರುವ ಅವರು, ``ಅವಧಿ ಮುಗಿದರೂ ಹಲವೆಡೆ ಟೋಲ್ ಸಂಗ್ರಹಿಸಲಾಗುತ್ತಿದೆ. ಹೀಗಾಗಿ ಲಾರಿ ಮಾಲಿಕರಿಗೆ ಆರ್ಥಿಕ ಹೊರೆ ಉಂಟಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧೆಡೆ ಟೋಲ್ ಸಂಗ್ರಹಿಸುವ ಮೂಲಕ ಹಗಲು ದರೋಡೆಗಿಳಿದಿವೆ.

ದೇಶಾದ್ಯಂತ ವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು. ಐದು ವರ್ಷಗಳಲ್ಲಿ ಟೋಲ್ ಸಂಗ್ರಹ ಮುಕ್ತಾಯಗೊಳಿಸುವುದಾಗಿ ಹೇಳಿದ್ದ ಸರ್ಕಾರಗಳು 20 ರಿಂದ 25 ವರ್ಷಗಳವರೆಗೆ ಟೋಲ್ ಸಂಗ್ರಹಿಸುತ್ತಿವೆ,'' ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT