ಮಹಿಳೆಯೊಂದಿಗೆ ಅಸಭ್ಯ ವರ್ತನೆ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕಾರಲ್ಲಿ ಬಂದ ದುಶ್ಯಾಸನ; ಮಹಿಳೆಯ ಸೀರೆ ಎಳೆಯಲು ಯತ್ನ..!

ಗುಡಿಸಲಿನಲ್ಲಿ ಮಹಿಳೆಯನ್ನು ಇಣುಕಿ ನೋಡಿ, ಯಾರು ಇಲ್ಲದನ್ನು ಗಮನಿಸಿ ಆಕೆಯ ಸೀರೆ ಎಳೆಯಲು ಪ್ರಯತ್ನಿಸಿದ ಒಲಾ ಕ್ಯಾಬ್ ಚಾಲಕನೊಬ್ಬನಿಗೆ ಧರ್ಮದೇಟು ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು: ಗುಡಿಸಲಿನಲ್ಲಿ ಮಹಿಳೆಯನ್ನು ಇಣುಕಿ ನೋಡಿ, ಯಾರು ಇಲ್ಲದನ್ನು ಗಮನಿಸಿ ಆಕೆಯ ಸೀರೆ ಎಳೆಯಲು ಪ್ರಯತ್ನಿಸಿದ ಒಲಾ ಕ್ಯಾಬ್ ಚಾಲಕನೊಬ್ಬನಿಗೆ ಧರ್ಮದೇಟು ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಂಜಯನಗರದಲ್ಲಿ ಈಘಟನೆ ನಡೆದಿದ್ದು, ಸಾಧಿಕ್‍ಪಾಷ(25 ವರ್ಷ) ಎಂಬಾತ ಮಂಗಳವಾರ ಮುಂಜಾನೆ ಮುಂಜಾನೆ 3.30 ರವೇಳೆ ಸಂಜಯನಗರದ ಅಶ್ವಥನಗರದಲ್ಲಿನ ರಸ್ತೆಯಲ್ಲಿ ಹೋಗುವಾಗ ಕ್ಯಾಬ್‍ನಿಲ್ಲಿಸಿ ಪಕ್ಕದ ಗುಡಿಸಲಿನಲ್ಲಿ ಮಲಗಿದ್ದ ಸುಮಾರು 30 ವರ್ಷದ ಮಹಿಳೆಯನ್ನು ಇಣಿಕಿನೋಡಿ ಸೀರೆ ಎಳೆಯಲು ಯತ್ನಿಸಿದ್ದಾನೆ. ಕೂಡಲೇ  ಎಚ್ಚರಗೊಂಡ ಮಹಿಳೆ ಕೂಗಿಕೊಂಡಿದ್ದು, ಅಲ್ಲಿಯೇ ಆಕೆಯ ಪತಿ ಹಾಗೂ ಸಂಬಂಧಿಕರು ಸಾದಿಕ್ ಪಾಷನನ್ನು ಹಿಡಿದು ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಲ್ಲದೆ ಸಂಜಯನಗರ ಪೊಲೀಸರಿಗೆ ಒಪ್ಪಿಸಿ ದೂರು ದಾಖಲಿಸಿದ್ದಾರೆ. ಆರೋಪಿ ಸಾಧಿಕ್‍ಪಾಷನನ್ನು ಬಂಧಿಸಿರುವ ಸಂಜಯನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾಧಿಕ್ ಪಾಷ ಗೋವಿಂದಪುರದ ನಿವಾಸಿಯಾಗಿದ್ದು, ಒಲಾ ಕ್ಯಾಬ್ ಸಂಸ್ಥೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಗುಡಿಸಲಿನಲ್ಲಿದ್ದ ಮಹಿಳೆ ಮೂಲತಃ ಉತ್ತರಪ್ರದೇಶದವರಾಗಿದ್ದು, ಜೀವನಾಧಾರಕ್ಕಾಗಿ ತಮ್ಮ ಸಂಬಂಧಿಕರೊಂದಿಗೆ ಅಶ್ವಥನಗರದ ರಸ್ತೆ ಪಕ್ಕ ಗುಡಿಸಲು ಹಾಕಿಕೊಂಡು ಹೂ ಕುಂಡಗಳು ಹಾಗೂ ಹೂವಿನ ಗಿಡಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT