ಸಾಹಿತಿ ಕುಂ.ವೀರಭದ್ರಪ್ಪ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಾಹಿತಿಗಳನ್ನು ಬೆದರಿಸುವುದೂ ಭಯೋತ್ಪಾದನೆಯೇ: ಕುಂ.ವೀ

ಸಾಹಿತಿಗಳಿಗೆ ಬೆದರಕೆ ಒಡ್ಡುವುದೂ ಒಂದು ರೀತಿಯ ಭಯೋತ್ಪಾದನೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ...

ಧಾರವಾಡ: ಸಾಹಿತಿಗಳಿಗೆ ಬೆದರಕೆ ಒಡ್ಡುವುದೂ ಒಂದು ರೀತಿಯ ಭಯೋತ್ಪಾದನೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ.

ಸೋಮವಾರ ಸಂಜೆ ಇಲ್ಲಿನ ಡಾ. ಎಂ. ಎಂ. ಕಲಬುರ್ಗಿ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಹಿಂಸೆಯನ್ನು ಪ್ರಚೋದಿಸುವ ಒಂದು ವರ್ಗ ಸಮಾಜದಲ್ಲಿ ಬೆಳೆಯುತ್ತಿದ್ದು, ಆದಷ್ಟು ಬೇಗ ಆ ವರ್ಗವನ್ನು ಹೊಡೆದೋಡಿಸಬೇಕು. ಇಲ್ಲದಿದ್ದರೆ ಇನ್ನಷ್ಟು ಅನಾಹುತಗಳಾಗುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.

``ಭಗವದ್ಗೀತೆಯಲ್ಲಿನ ಕೆಲ ಅಮಾನವೀಯ ಅಂಶಗಳನ್ನು ನಾನೂ ವಿರೋಧಿಸಿದ್ದೇನೆ. ಆದರೆ, ಭಗವದ್ಗೀತೆ ಸುಡಬೇಕೆಂದು ಹೇಳಿದೆ ಪ್ರೊ. ಕೆ.ಎಸ್. ಭಗವಾನ್ ಅವರ ಹೇಳಿಕೆಯನ್ನು ನಾನು ಒಪ್ಪೋದಿಲ್ಲ'' ಎಂದು ಪ್ರತಿಪಾದಿಸಿದ ಕುಂ.ವೀ, ``ಈ ಹೇಳಿಕೆಯಿಂದಾಗಿ ಅವರಿಗೆ ಬೆದರಿಕೆ ಬರುತ್ತಿದ್ದು, ಸಾಹಿತಿಗಳಿಗೆ ಎಷ್ಟೇ ರಕ್ಷಣೆ ನೀಡಿದರೂ ಅವರು ಕ್ಷೇಮವಾಗಿರಲು ಸಾಧ್ಯವಿಲ್ಲ'' ಎಂದರು. ಈ ಸಂದರ್ಭದಲ್ಲಿ ಮಧ್ಯಪ್ರದೇಶದ ಬುಡಕಟ್ಟ ವಿವಿ ಕುಲಪತಿ ಡಾ. ತೇಜಸ್ವಿ ಕಟ್ಟೀಮನಿ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT