ಸಾಹಿತಿ ಕುಂ.ವೀರಭದ್ರಪ್ಪ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಾಹಿತಿಗಳನ್ನು ಬೆದರಿಸುವುದೂ ಭಯೋತ್ಪಾದನೆಯೇ: ಕುಂ.ವೀ

ಸಾಹಿತಿಗಳಿಗೆ ಬೆದರಕೆ ಒಡ್ಡುವುದೂ ಒಂದು ರೀತಿಯ ಭಯೋತ್ಪಾದನೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ...

ಧಾರವಾಡ: ಸಾಹಿತಿಗಳಿಗೆ ಬೆದರಕೆ ಒಡ್ಡುವುದೂ ಒಂದು ರೀತಿಯ ಭಯೋತ್ಪಾದನೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ.

ಸೋಮವಾರ ಸಂಜೆ ಇಲ್ಲಿನ ಡಾ. ಎಂ. ಎಂ. ಕಲಬುರ್ಗಿ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಹಿಂಸೆಯನ್ನು ಪ್ರಚೋದಿಸುವ ಒಂದು ವರ್ಗ ಸಮಾಜದಲ್ಲಿ ಬೆಳೆಯುತ್ತಿದ್ದು, ಆದಷ್ಟು ಬೇಗ ಆ ವರ್ಗವನ್ನು ಹೊಡೆದೋಡಿಸಬೇಕು. ಇಲ್ಲದಿದ್ದರೆ ಇನ್ನಷ್ಟು ಅನಾಹುತಗಳಾಗುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.

``ಭಗವದ್ಗೀತೆಯಲ್ಲಿನ ಕೆಲ ಅಮಾನವೀಯ ಅಂಶಗಳನ್ನು ನಾನೂ ವಿರೋಧಿಸಿದ್ದೇನೆ. ಆದರೆ, ಭಗವದ್ಗೀತೆ ಸುಡಬೇಕೆಂದು ಹೇಳಿದೆ ಪ್ರೊ. ಕೆ.ಎಸ್. ಭಗವಾನ್ ಅವರ ಹೇಳಿಕೆಯನ್ನು ನಾನು ಒಪ್ಪೋದಿಲ್ಲ'' ಎಂದು ಪ್ರತಿಪಾದಿಸಿದ ಕುಂ.ವೀ, ``ಈ ಹೇಳಿಕೆಯಿಂದಾಗಿ ಅವರಿಗೆ ಬೆದರಿಕೆ ಬರುತ್ತಿದ್ದು, ಸಾಹಿತಿಗಳಿಗೆ ಎಷ್ಟೇ ರಕ್ಷಣೆ ನೀಡಿದರೂ ಅವರು ಕ್ಷೇಮವಾಗಿರಲು ಸಾಧ್ಯವಿಲ್ಲ'' ಎಂದರು. ಈ ಸಂದರ್ಭದಲ್ಲಿ ಮಧ್ಯಪ್ರದೇಶದ ಬುಡಕಟ್ಟ ವಿವಿ ಕುಲಪತಿ ಡಾ. ತೇಜಸ್ವಿ ಕಟ್ಟೀಮನಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?