(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬಡ್ತಿಗಾಗಿ ನಕಲಿ ಪ್ರಮಾಣಪತ್ರ: ಕೆಲಸ ಕಳೆದುಕೊಂಡ ಅತಿಬುದ್ಧಿವಂತ!

ಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಸೇವೆಯಿಂದಲೇ ಅಮಾನತಾದ ಪ್ರಸಂಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ...

ಬೆಂಗಳೂರು: ಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಸೇವೆಯಿಂದಲೇ ಅಮಾನತಾದ ಪ್ರಸಂಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ.

ಬೆಂಗಳೂರಿನ ಎಸ್‍ಕೆಎಸ್‍ಜೆಟಿ ಸಂಸ್ಥೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಜಿ.ಕಿಶನ್ ಅವರು ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿಗೆ ಇಲಾಖೆಗೆ ಸಲ್ಲಿಸಿದ್ದ ಅಕೌಂಟ್ಸ್ ಹೈಯರ್ ಪ್ರಮಾಣಪತ್ರವು ನಕಲಿ ಎಂಬುದು ಸಾಬೀತಾಗಿದೆ. ಲೋಕಸೇವಾ ಆಯೋಗವು ಕಿಶನ್ ಸಲ್ಲಿಸಿದ್ದ ಪ್ರಮಾಣಪತ್ರ ನಕಲಿ ಎಂದು ಖಚಿತಪಡಿಸಿದೆ. ಪ್ರಮಾಣಪತ್ರ ನಕಲಿ ಎಂದು ಗೊತ್ತಾಗುತ್ತಿದ್ದಂತೆ ಮೂಲ ಪ್ರಮಾಣಪತ್ರ ಸಲ್ಲಿಸುವಂತೆ ಇಲಾಖೆಯು ಕಿಶನ್‍ಗೆ ನೋಟಿಸ್ ನೀಡಿತ್ತು.

ಮೌಖಿಕವಾಗಿಯೂ ಸೂಚನೆ ನೀಡಲಾಗಿತ್ತು. ನಂತರ ಇಲಾಖೆಯು ದೀರ್ಘಾವಧಿ ಅನಧಿಕೃತ ಗೈರುಹಾಜರಾದ ಹಿನ್ನೆಲೆಯಲ್ಲಿ ಹಾಗೂ ಅಕೌಂಟ್ಸ್ ಹೈಯರ್ ಇಲಾಖಾ ಪರೀಕ್ಷೆ ತೇರ್ಗಡೆಯಾಗಿರುವ ಬಗ್ಗೆ ನಕಲಿ ಪ್ರಮಾಣಪತ್ರ ಸಲ್ಲಿಸಿದ ಆರೋಪ ಹೊರಿಸಿ ನಿಯಮಾನುಸಾರ ದೋಷರೋಪಣ ಪಟ್ಟಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

ಯುದ್ಧದ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

Cricket Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ Arjun Tendulkar, ಯಾರು ಸಾನಿಯಾ ಚಂದೋಕ್? video

SCROLL FOR NEXT