(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬಡ್ತಿಗಾಗಿ ನಕಲಿ ಪ್ರಮಾಣಪತ್ರ: ಕೆಲಸ ಕಳೆದುಕೊಂಡ ಅತಿಬುದ್ಧಿವಂತ!

ಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಸೇವೆಯಿಂದಲೇ ಅಮಾನತಾದ ಪ್ರಸಂಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ...

ಬೆಂಗಳೂರು: ಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಸೇವೆಯಿಂದಲೇ ಅಮಾನತಾದ ಪ್ರಸಂಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ.

ಬೆಂಗಳೂರಿನ ಎಸ್‍ಕೆಎಸ್‍ಜೆಟಿ ಸಂಸ್ಥೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಜಿ.ಕಿಶನ್ ಅವರು ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿಗೆ ಇಲಾಖೆಗೆ ಸಲ್ಲಿಸಿದ್ದ ಅಕೌಂಟ್ಸ್ ಹೈಯರ್ ಪ್ರಮಾಣಪತ್ರವು ನಕಲಿ ಎಂಬುದು ಸಾಬೀತಾಗಿದೆ. ಲೋಕಸೇವಾ ಆಯೋಗವು ಕಿಶನ್ ಸಲ್ಲಿಸಿದ್ದ ಪ್ರಮಾಣಪತ್ರ ನಕಲಿ ಎಂದು ಖಚಿತಪಡಿಸಿದೆ. ಪ್ರಮಾಣಪತ್ರ ನಕಲಿ ಎಂದು ಗೊತ್ತಾಗುತ್ತಿದ್ದಂತೆ ಮೂಲ ಪ್ರಮಾಣಪತ್ರ ಸಲ್ಲಿಸುವಂತೆ ಇಲಾಖೆಯು ಕಿಶನ್‍ಗೆ ನೋಟಿಸ್ ನೀಡಿತ್ತು.

ಮೌಖಿಕವಾಗಿಯೂ ಸೂಚನೆ ನೀಡಲಾಗಿತ್ತು. ನಂತರ ಇಲಾಖೆಯು ದೀರ್ಘಾವಧಿ ಅನಧಿಕೃತ ಗೈರುಹಾಜರಾದ ಹಿನ್ನೆಲೆಯಲ್ಲಿ ಹಾಗೂ ಅಕೌಂಟ್ಸ್ ಹೈಯರ್ ಇಲಾಖಾ ಪರೀಕ್ಷೆ ತೇರ್ಗಡೆಯಾಗಿರುವ ಬಗ್ಗೆ ನಕಲಿ ಪ್ರಮಾಣಪತ್ರ ಸಲ್ಲಿಸಿದ ಆರೋಪ ಹೊರಿಸಿ ನಿಯಮಾನುಸಾರ ದೋಷರೋಪಣ ಪಟ್ಟಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT