ರಾಘವೇಶ್ವರ ಸ್ವಾಮೀಜಿ ವಿರುದ್ಧ ತನಿಖೆ ಪೂರ್ಣಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನ ಬಳಿ ಪ್ರತಿಭಟನೆ ನಡೆಸ 
ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀ ವಿರುದ್ಧ ಪ್ರತಿಭಟನೆ

ದೇವರ ಹೆಸರಿನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ರಾಘವೇಶ್ವರ ಭಾರತಿ ಸ್ವಾಮೀಜಿ ಯ ವಿರುದ್ಧ ಶೀಘ್ರ ತನಿಖೆ ಮುಗಿಸಿ...

ಬೆಂಗಳೂರು: ದೇವರ ಹೆಸರಿನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ರಾಘವೇಶ್ವರ ಭಾರತಿ ಸ್ವಾಮೀಜಿ ಯ ವಿರುದ್ಧ ಶೀಘ್ರ ತನಿಖೆ ಮುಗಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ಸೋಮವಾರ ಸ್ವಾತಂತ್ರ್ಯ ಉದ್ಯಾನ ಬಳಿ ಡೆದ ಈ ಪ್ರತಿಭಟನೆಯಲ್ಲಿ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ, ಭಾರತ ವಿದ್ಯಾರ್ಥಿ ಫೆಡರೇಷನ್, ವಿದ್ಯಾರ್ಥಿನಿಯರ ಉಪ ಸಮಿತಿ, ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಮಹಿಳೆಯರ ಉಪ ಸಮಿತಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘಟನೆಗಳ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮೊದಲು ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತನಾಡಿದ ಮಹಿಳಾ ಸಂಘಟನೆ ಅಧ್ಯಕ್ಷೆ ವಿಮಲಾ, ಅತ್ಯಾಚಾರ ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಕಪಟಿ ಸ್ವಾಮಿಗಳ ವಿರುದ್ದ ಸಾರ್ವಜನಿಕರು ಎಚ್ಚೆತ್ತು ಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ