ಅಂತರ್ಜಾಲ ಬಳಕೆ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಅಂತರ್ಜಾಲ ನೀತಿ ರಚನೆಯಲ್ಲಿ ಸರ್ಕಾರದ ಪಾತ್ರ ಮಹತ್ವವಾದದ್ದು: ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ

ಅಂತರ್ಜಾಲ ನೀತಿ ರಚನೆಯಲ್ಲಿ ಸರ್ಕಾರದ ಪಾತ್ರ ಮಹತ್ವ ಪಡೆದಿದೆ ಎಂದು ರಾಷ್ಟ್ರೀಯ ಭದ್ರತಾ ಉಪಸಲಹೆಗಾರ ಡಾ.ಅರವಿಂದ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಸೈಬರ್ ಗೆ ಸಂಬಂಧಿಸಿದಂತೆ ನೀತಿ ರಚನೆಯಾಗಬೇಕೆಂಬ ಒತ್ತಾಯ ಕೇಳಿಬರುತ್ತಿದ್ದು,  ಅಂತರ್ಜಾಲ ನೀತಿ ರಚನೆಯಲ್ಲಿ ಸರ್ಕಾರದ ಪಾತ್ರ ಮಹತ್ವ ಪಡೆದಿದೆ ಎಂದು ರಾಷ್ಟ್ರೀಯ ಭದ್ರತಾ ಉಪಸಲಹೆಗಾರ ಡಾ.ಅರವಿಂದ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸೈಬರ್ 360 ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಇಂಟರ್ನೆಟ್ ಪ್ರಮುಖ ಸ್ಪರ್ಧಿಗಳು ಭಾರತದವರಾಗಲಿದ್ದಾರೆ. ಆದ್ದರಿಂದ ಸೂಕ್ತ ನೆಟ್ವರ್ಕ್ ಮತ್ತು ನೀತಿ ರಚನೆ ಪ್ರಾಮುಖ್ಯತೆ ಪಡೆದಿದೆ. ಸರ್ಕಾರ ಈ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದ್ದಾರೆ.
ಸೈಬರ್ ದಾಳಿ ಮತ್ತು ಸೈಬರ್ ಯುದ್ಧ ಭಯ ಕಾಡುತ್ತಿರುವುದರಿಂದ ಅಂತರ್ಜಾಲ ನೀತಿ ರಚನೆ, ಸಮರ್ಪಕ ನೆಟ್ವರ್ಕ್ ಸ್ಥಾಪಿಸುವುದು ಅಗತ್ಯವಾಗಿದೆ. ಜಾಗತಿಕ ಮಟ್ಟದ ಭದ್ರತೆ ವಿಷಯ ಚರ್ಚೆಯಾದಾಗಳೆಲ್ಲಾ ಸೈಬರ್ ಭದ್ರತೆ ವಿಷಯ ಮಹತ್ವ ಪಡೆದುಕೊಳ್ಳುತ್ತದೆ. ಸೈಬರ್ ಭದ್ರತೆ ಬಗ್ಗೆ ಜಗತ್ತಿನಲ್ಲಿರುವ ಎಲ್ಲಾ ರಾಷ್ಟ್ರಗಳು ಚರ್ಚೆ ನಡೆಸುತ್ತಿವೆ. ವಿಶ್ವ ಸಂಸ್ಥೆ ಮಟ್ಟದಲ್ಲಿ ಕೂಡ ಈ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸೈಬರ್ ನೀತಿ ರಚನೆಗೆ ಸಂಬಂಧಿಸಿದಂತೆ ಭಾರತ ಮಹತ್ವದ ಪಾತ್ರ ವಹಿಸಬೇಕಿದೆ ಎಂದು ಅರವಿಂದ್ ಗುಪ್ತಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT