ಪ್ರಣವಾನಂದ ಸ್ವಾಮೀಜಿ 
ಜಿಲ್ಲಾ ಸುದ್ದಿ

ಹುಬ್ಬಳ್ಳಿಯಲ್ಲಿ ಮತ್ತೆ ಪ್ರಣವಾನಂದ ಶ್ರೀ ವಿಚಾರಣೆ

ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ರಾಣಿಬೆನ್ನೂರು ತಾಲೂಕು ಆರೆಮಲ್ಲಾಪುರದ ಪ್ರಣವಾನಂದ ಸ್ವಾಮೀಜಿ ....

ಧಾರವಾಡ: ಸಾಹಿತಿ ಡಾ.ಎಂ.ಎಂ ಕಲಬುರ್ಗಿ  ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ರಾಣಿಬೆನ್ನೂರು ತಾಲೂಕು ಆರೆಮಲ್ಲಾಪುರದ ಪ್ರಣವಾನಂದ ಸ್ವಾಮೀಜಿ ಅವರನ್ನು ಹುಬ್ಬಳ್ಳಿಯಲ್ಲಿ  ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಂಜೆ 5ರಿಂದ 7 ವರೆಗೆ ಸುಮಾರು ಎರಡು ತಾಸು ವಿಚಾರಣೆ ನಡೆಸಿದ ಎಸ್ಪಿ ಡಿ.ಸಿ ರಾಜಪ್ಪ ನೇತೃತ್ವದ  ಸಿಐಡಿ ತಂಡ, ಅವರ ಮೊಬೈಲ್ ಹಾಗೂ ಲ್ಯಾಪ್ ಟ್ಯಾಪ್ ಅನ್ನು ಪರಿಶೀಲನೆಗೆ ಒಳಪಡಿಸಿತು.  ಬಳಿಕ ಅವುಗಳನ್ನು ಮರಳಿಸಿದ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ಸೂಚಿಸಿದೆ.

ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಣಾವಾನಂದ  ಸ್ವಾಮೀಜಿ ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಸಿಐಡಿ  ಅಧಿಕಾರಿಗಳು ವಿನಾಕಾರಣ ತಮ್ಮನ್ನು ಆಗಾಗ ಕರೆಸಿ ವಿಚಾರಣೆ ಮಾಡುತ್ತಿದ್ದಾರೆ. ಈ ಸಲ ಆರೋಪಿಗಳ ಬಗ್ಗೆ ಏನಾದರೂ ಮಾಹಿತಿ ಇದೆಯೇ ಎಂದು ಕೇಳಿದ್ದಾರೆ. ಆದರೆ ಸ್ವಾಮೀಜಿಯಾಗಿ ತಾವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ವಿಧ್ವಂಸಕ ಕೃತ್ಯಗಳನ್ನು ನಡೆಸುವವರ ಸಂಪರ್ಕ ಇಲ್ಲ. ವಿನಾಕಾರಣ ತಮ್ಮ ಮೇಲೆ ಯಾರೋ ಆರೋಪ ಹೊರಿಸುತ್ತಿದ್ದಾರೆ. ಕಲಬುರ್ಗಿ ಅವರ ಕೊಲೆ ಬಗ್ಗೆ ತಮಗೇನು ಗೊತ್ತಿಲ್ಲವೆಂದು ತಿಳಿಸಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT