ಮಹಾರಾಷ್ಟ್ರ ವಿಚಾರವಾದಿ ಗೋವಿಂದ ಪಾನ್ಸರೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವಿಚಾರವಾದಿಗಳ ಹತ್ಯೆ ಹಿಂದೆ ಸನಾತನ ಇಲ್ಲ: ರಾಮದಾಸ ಕೇಸರಕರ

ದೇಶದಲ್ಲಿ ನಡೆಯುತ್ತಿರುವ ವಿಚಾರವಾದಿಗಳ ಹತ್ಯೆಗಳ ಪ್ರಕರಣದಲ್ಲಿ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ಸಂಸ್ಥೆಯ ಕೈವಾಡವಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರ ರಾಮದಾಸ ಕೇಸರಕರ ಸ್ಪಷ್ಟಪಡಿಸಿದರು...

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ ವಿಚಾರವಾದಿಗಳ ಹತ್ಯೆಗಳ ಪ್ರಕರಣದಲ್ಲಿ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ಸಂಸ್ಥೆಯ ಕೈವಾಡವಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರ ರಾಮದಾಸ ಕೇಸರಕರ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ವಿಚಾರವಾದಿ ಗೋವಿಂದ ಪಾನ್ಸರೆ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಸನಾತನದ ಸದಸ್ಯ ಸಮೀರ ಗಾಯಕವಾಡರನ್ನು ಶಂಕಿತ ಆರೋಪಿಯೆಂದು ಪೊಲೀಸರು ಬಂಧಿಸಿದ ಕಾರಣ ಕೆಲವರು ತಮ್ಮ ಸಂಸ್ಥೆ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ ಸಮೀರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ವಿನಾಕಾರಣ ಆರೋಪ ಮಾಡಲಾಗುತ್ತಿದ್ದು, ಅದನ್ನು ನಿಲ್ಲಿಸಬೇಕು.

ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಸಮೀರ ಗಾಯಕವಾಡ ಅಪರಾಧಿ ಎಂಬುದು ಸಾಬೀತಾಗಿಲ್ಲ. ಆದರೆ, ತಪ್ಪಿತಸ್ಥರ ವಿರುದ್ಧ ನ್ಯಾಯಾಲಯ ಕಠಿಣ ಕ್ರಮಕೈಗೊಳ್ಳಲಿ ಎಂದು ಒತ್ತಾಯಿಸಿದರು. ಹಿಂದುತ್ವವನ್ನು ದಮನ ಮಾಡುವ ಉದ್ದೇಶದಿಂದ ಕೆಲವು ಸಂಘಟನೆಗಳು ಸನಾತನ ಸಂಸ್ಥೆಯ ಮೇಲೆ ಆರೋಪ ಮಾಡುತ್ತಿದ್ದಾರೆ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಸಂಸ್ಥೆ ಕೈವಾಡ ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ