ಮಹಾರಾಷ್ಟ್ರ ವಿಚಾರವಾದಿ ಗೋವಿಂದ ಪಾನ್ಸರೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವಿಚಾರವಾದಿಗಳ ಹತ್ಯೆ ಹಿಂದೆ ಸನಾತನ ಇಲ್ಲ: ರಾಮದಾಸ ಕೇಸರಕರ

ದೇಶದಲ್ಲಿ ನಡೆಯುತ್ತಿರುವ ವಿಚಾರವಾದಿಗಳ ಹತ್ಯೆಗಳ ಪ್ರಕರಣದಲ್ಲಿ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ಸಂಸ್ಥೆಯ ಕೈವಾಡವಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರ ರಾಮದಾಸ ಕೇಸರಕರ ಸ್ಪಷ್ಟಪಡಿಸಿದರು...

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ ವಿಚಾರವಾದಿಗಳ ಹತ್ಯೆಗಳ ಪ್ರಕರಣದಲ್ಲಿ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ಸಂಸ್ಥೆಯ ಕೈವಾಡವಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರ ರಾಮದಾಸ ಕೇಸರಕರ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ವಿಚಾರವಾದಿ ಗೋವಿಂದ ಪಾನ್ಸರೆ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಸನಾತನದ ಸದಸ್ಯ ಸಮೀರ ಗಾಯಕವಾಡರನ್ನು ಶಂಕಿತ ಆರೋಪಿಯೆಂದು ಪೊಲೀಸರು ಬಂಧಿಸಿದ ಕಾರಣ ಕೆಲವರು ತಮ್ಮ ಸಂಸ್ಥೆ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ ಸಮೀರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ವಿನಾಕಾರಣ ಆರೋಪ ಮಾಡಲಾಗುತ್ತಿದ್ದು, ಅದನ್ನು ನಿಲ್ಲಿಸಬೇಕು.

ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಸಮೀರ ಗಾಯಕವಾಡ ಅಪರಾಧಿ ಎಂಬುದು ಸಾಬೀತಾಗಿಲ್ಲ. ಆದರೆ, ತಪ್ಪಿತಸ್ಥರ ವಿರುದ್ಧ ನ್ಯಾಯಾಲಯ ಕಠಿಣ ಕ್ರಮಕೈಗೊಳ್ಳಲಿ ಎಂದು ಒತ್ತಾಯಿಸಿದರು. ಹಿಂದುತ್ವವನ್ನು ದಮನ ಮಾಡುವ ಉದ್ದೇಶದಿಂದ ಕೆಲವು ಸಂಘಟನೆಗಳು ಸನಾತನ ಸಂಸ್ಥೆಯ ಮೇಲೆ ಆರೋಪ ಮಾಡುತ್ತಿದ್ದಾರೆ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಸಂಸ್ಥೆ ಕೈವಾಡ ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT