(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೈಸಿಕೊಳ್ಳುವ ಭಯದಲ್ಲಿ ಕಿಡ್ನ್ಯಾಪ್ ನಾಟಕ ಹೆಣೆದ

ಪರೀಕ್ಷೆಯಲ್ಲಿ ಕಡಿಮೆ ಅಂಕ ಹಾಗೂ ಸೈಕಲ್ ಕಳೆದುಕೊಂಡಿದ್ದಕ್ಕೆ ಪಾಲಕರು ಬಯ್ಯುತ್ತಾರೆ ಎನ್ನುವ ಭೀತಿಯಿಂದ ಬಾಲಕನೊಬ್ಬ ಗಮನ ಬೇರೆಡೆ ಸೆಳೆಯಲು ಅಪಹರಣ ನಾಟಕವಾಡಿದ ಘಟನೆ ಬುಧವಾರ ನಡೆದಿದೆ...

ಬೆಂಗಳೂರು: ಪರೀಕ್ಷೆಯಲ್ಲಿ ಕಡಿಮೆ ಅಂಕ ಹಾಗೂ ಸೈಕಲ್ ಕಳೆದುಕೊಂಡಿದ್ದಕ್ಕೆ ಪಾಲಕರು ಬಯ್ಯುತ್ತಾರೆ ಎನ್ನುವ ಭೀತಿಯಿಂದ ಬಾಲಕನೊಬ್ಬ ಗಮನ ಬೇರೆಡೆ ಸೆಳೆಯಲು ಅಪಹರಣ ನಾಟಕವಾಡಿದ ಘಟನೆ ಬುಧವಾರ ನಡೆದಿದೆ.

ಪಾಪರೆಡ್ಡಿ ಪಾಳ್ಯ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 13 ವರ್ಷದ ಬಾಲಕನ ತಂದೆ ಕೆಲ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಪಾಲಕರು ಕೊಡಿಸಿದ ಸೈಕಲ್ ಕಳೆದುಕೊಂಡಿದ್ದ ಬಾಲಕ ಶಾಲೆಯಲ್ಲಿ ನಡೆದ ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದ. ಈ ವಿಷಯ ಮನೆಯಲ್ಲಿ ಗೊತ್ತಾದರೆ ಬಯ್ಯುತ್ತಾರೆ ಎಂದು ಅಪಹರಣದ ಕಥೆ ಕಟ್ಟಿದ್ದ.

ಬುಧವಾರ ಮಧ್ಯಾಹ್ನ ತಾನಾಗಿಯೇ ಯಲಹಂಕಕ್ಕೆ ತೆರಳಿ ಅಲ್ಲಿಂದ ಬೇರೆಯವರ ಮೊಬೈಲ್ ಪಡೆದು ಕರೆ ಮಾಡಿ, ನನ್ನನ್ನು ಕೆಲವರು ಅಪಹರಿಸಿಕೊಂಡು ಕಾರಿನಲ್ಲಿ ಹೋಗಿದ್ದರು. ರಸ್ತೆ ಹಂಪ್ಸ್ ಬಳಿ ವಾಹನ ನಿಧಾನಗೊಂಡಾಗ ವಾಹನದಿಂದ ಜಿಗಿದು ಪಾರಾಗಿದ್ದೇನೆ. ಬೇರೆ ವಿದ್ಯಾರ್ಥಿಗಳು ವಾಹನದಲ್ಲಿದ್ದು ಅಪಹರಣಕಾರರು ಪ್ರಜ್ಞೆ ತಪ್ಪಿಸಿ ಕರೆದೊಯ್ದಿದ್ದಾರೆ ಎಂದು ಪಾಲಕರಿಗೆ ತಿಳಿಸಿದ್ದ.

ಈ ಹಿನ್ನೆಲೆಯಲ್ಲಿ ಬಾಲಕ ಹಾಗೂ ಪಾಲಕರೊಂದಿಗೆ ಕುಳಿತು ಪೊಲೀಸರು ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದಾದಾಗ ಸತ್ಯ ಹೇಳಿದ್ದಾನೆ. ಪಾಲಕರು ಬಯ್ಯುತ್ತಾರೆ ಎನ್ನುವ ಕಾರಣಕ್ಕೆ ಕಿಡ್ನ್ಯಾಪ್ ಕಥೆ ಕಟ್ಟಿದ್ದಾಗಿ ಹೇಳಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT