ಜಿಲ್ಲಾ ಸುದ್ದಿ

ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಸಂಭ್ರಮ

Mainashree

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವರಾತ್ರಿಗೆ ಮುನ್ನವೇ ಸರ್ಕಾರ ಸಿಹಿ ಸುದ್ದಿ ಪ್ರಕಟಿಸಿದೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಬುಧವಾರ ಆದೇಶ ನೀಡಿದ್ದಾರೆ.

ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬರಲಿದೆ. ಇದರಿಂದಾಗಿ ಮೂಲವೇತನದ ಶೇ.2875 ರಿಂದ ಶೇ.32.5ಕ್ಕೆ ಹೆಚ್ಚಳವಾಗಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಹರ್ಷ ವ್ಯಕ್ತಪಡಿಸಿದೆ.

SCROLL FOR NEXT