ಆರ್.ವಿ.ದೇಶಪಾಂಡೆ 
ಜಿಲ್ಲಾ ಸುದ್ದಿ

ದೇಶಪಾಂಡೆ ವಿರುದ್ಧ 2 ದಿನಗಳಲ್ಲಿ ವರದಿ

ಬೃಹತ್ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧದ ಅರಣ್ಯಭೂಮಿ ಅತಿಕ್ರಮಣ ಪ್ರಕರಣ ಸಂಬಂಧಬೆಂಗಳೂರು...

ಬೆಂಗಳೂರು:ಬೃಹತ್ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧದ ಅರಣ್ಯಭೂಮಿ ಅತಿಕ್ರಮಣ ಪ್ರಕರಣ ಸಂಬಂಧ ಬೆಂಗಳೂರು ನಗರ ಜಿಲ್ಲಾಡಳಿತ ಇನ್ನೆರಡು ದಿನಗಳಲ್ಲಿ ವರದಿ ಸಲ್ಲಿಸುವ ಸಾಧ್ಯತೆ ಇದೆ.ಜಿಲ್ಲಾಡಳಿತ 1935ರಿಂದ ಇಲ್ಲಿಯವರೆಗಿನ ಭೂ ದಾಖಲೆಗಳ ವಿವರ ಪರಿಶೀಲನೆ ನಡೆಸುತ್ತಿದ್ದು, ಜಿಲ್ಲಾಧಿಕಾರಿ ವಿ.ಶಂಕರ್ ಕಂದಾಯ ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಿದ್ದಾರೆ.

ಮಾಹಿತಿ ಪ್ರಕಾರ ಜಕ್ಕೂರು ಅಲ್ಲಾಳ ಸಂದ್ರದ 199 ಎಕರೆ ಜಾಗವನ್ನು 1935ರಲ್ಲಿ ಜಕ್ಕೂರು ಏರೋ ಡ್ರಮ್ ಉದ್ದೇಶಕ್ಕೆ ನೋಟಿಫೈ ಮಾಡಲಾಗಿದೆ. 1940ರಲ್ಲಿ ಈ ಎರಡು ಗ್ರಾಮದ ಒಟ್ಟು 327 ಎಕರೆ ಜಾಗದ ಪೈಕಿ 177 ಎಕರೆಯನ್ನು ಜಕ್ಕೂರು ಪ್ಲಾಂಟೇಶನ್ ಗಾಗಿ ಅರಣ್ಯ ಇಲಾಖೆಗೆ ನೀಡಲಾಗಿತ್ತು. ಈ ದಾಖಲೆ ಆಧಾರದ ಮೇಲೆ 75 ವರ್ಷದ ಬಳಿಕ ಸ್ಥಳೀಯ ಎಸಿಎಫ್ ಅವರು ತಹಶೀಲ್ದಾರರಿಗೆ ಪತ್ರ ಬರೆದು ಇದು ಅರಣ್ಯ ಇಲಾಖೆಗೆ ಸೇರಿದ ಜಾಗವಾಗಿದ್ದು, ಹಕ್ಕುಪತ್ರ ಮಾಡಿಕೊಡುವಂತೆ ಮನವಿ ಮಾಡಿದ್ದರು. ಇದೇ ಜಾಗ ಈಗ ಒತ್ತುವರಿಯಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT