ಡಾ.ಎಂ.ಎಂ ಕಲಬುರಗಿ 
ಜಿಲ್ಲಾ ಸುದ್ದಿ

ಕಲ್ಬುರ್ಗಿ ಹತ್ಯೆ ಪ್ರಕರಣ: ಇನ್ನೂ ಹಂತಕರ ಸುಳಿವಿಲ್ಲ

ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆಯಾಗಿ ಸೆ. 30ಕ್ಕೆ ಒಂದು ತಿಂಗಳು ಗತಿಸಿತು. ಆದರೂ ಸಿಐಡಿ ಅಧಿಕಾರಿಗಳಿಂದ ಆರೋಪಿಯನ್ನು ಬಂಧಿಸುವುದಿರಲಿ, ...

ಧಾರವಾಡ: ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆಯಾಗಿ ಸೆ. 30ಕ್ಕೆ ಒಂದು ತಿಂಗಳು ಗತಿಸಿತು. ಆದರೂ ಸಿಐಡಿ ಅಧಿಕಾರಿಗಳಿಂದ ಆರೋಪಿಯನ್ನು ಬಂಧಿಸುವುದಿರಲಿ, ಪ್ರಮುಖ ಸುಳಿವು ಪಡೆಯಲೂ ಸಾಧ್ಯವಾಗಲಿಲ್ಲ.

ಆ. 30ರಂದು ಭಾನುವಾರ ಬೆಳಗ್ಗೆ ಇಲ್ಲಿನ ಕಲ್ಯಾಣನಗರದ `ಸೌಜನ್ಯ' ನಿವಾಸದಲ್ಲಿ ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಹಂತಕರನ್ನು ಶೀಘ್ರ ಬಂಧಿಸಲು ಎಸಿಪಿ ವಾಸುದೇವ ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಆದರೆ, ಡಾ. ಎಂ.ಎಂ. ಕಲಬುರ್ಗಿ ಅವರ ಸಾವು ವೈಚಾರಿಕ ಹಿನ್ನೆಲೆಯಲ್ಲಿ ಆಗಿದೆ ಎಂಬ ಒತ್ತಡದ ಹಿನ್ನೆಲೆಯಲ್ಲಿ ತನಿಖೆಯ ಹೊಣೆಯನ್ನು ಸಿಐಡಿ ಎಸ್ಪಿ ಡಿ.ಸಿ. ರಾಜಪ್ಪ ಅವರಿಗೆ ಎರಡೇ ದಿನಗಳಲ್ಲಿ ವಹಿಸಲಾಗಿತ್ತು. ಮಹಾರಾಷ್ಟ್ರದ ಚಿಂತಕ ಗೋವಿಂದ ಪಾನ್ಸರೆ ಅವರ ಕೊಲೆಯ ಪ್ರಮುಖ ಆರೋಪಿ ಸಮೀರ ಗಾಯಕವಾಡನನ್ನು ಅಲ್ಲಿನ ಎಸ್‍ಐಟಿ ವಿಚಾರಣೆ ನಡೆಸುತ್ತಿದ್ದು, ಡಾ. ಕಲಬುರ್ಗಿ ಅವರ ಹತ್ಯೆಯಲ್ಲೂ ಈತನ ಕೈವಾಡ ಇರಬಹುದು ಎಂದು ಸಿಐಡಿ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಆದರೆ, ಸಮೀರ್ ವಿಚಾರಣೆಗೆ ಅವಕಾಶ ಸಿಗುತ್ತಿಲ್ಲ. ಅಲ್ಲದೆ, ಸಮೀರ್ ಸಾಂಗ್ಲಿಯ ರುದ್ರ ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲನ ಹೆಸರು ಬಾಯಿ ಬಿಟ್ಟಿದ್ದು, ಆತನ ಮೇಲೂ ಸಂಶಯ ವ್ಯಕ್ತಪಡಿಸಿರುವ ಸಿಐಡಿ ಅಧಿಕಾರಿಗಳು, 10 ದಿನಗಳಿಂದ ಎಸ್‍ಐಟಿ ಸಹಯೋಗದಲ್ಲಿ ರುದ್ರ ಪಾಟೀಲ್ ಬೆನ್ನು ಬಿದ್ದಿದ್ದಾರೆ. ಆತನ ಸುಳಿವೂ ಪತ್ತೆಯಾಗಿಲ್ಲ. ಮತ್ತೆ ಕೊಲ್ಹಾಪುರಕ್ಕೆ: ಕಲಬುರ್ಗಿ ಅವರ ಹತ್ಯೆಯಾದ ಮೇಲೆ 15 ದಿನ ನಿರಂತರವಾಗಿ ಅವರ ಮನೆಗೆ ಎಡತಾಕಿದ ಸಿಐಡಿ ಅಧಿಕಾರಿಗಳು, ಇದೀಗ ಆರೋಪಿಯ ಸುಳಿವಿಗಾಗಿ ಮಹಾರಾಷ್ಟ್ರದ ದಿಕ್ಕಿಗೆ ಹೊರಳಿದ್ದಾರೆ. ಇಷ್ಟಾದರೂ ಹಂತಕನ ಬಗ್ಗೆ ಸ್ಪಷ್ಟ ಕಲ್ಪನೆ ದೊರೆಯುತ್ತಿಲ್ಲ. ಈ ಮಧ್ಯೆ ಸಿಐಡಿ ಡಿಎಸ್ಪಿ ನೇತೃತ್ವದ ತಂಡ ಬುಧವಾರ ಮತ್ತೆ ಕೊಲ್ಹಾಪುರಕ್ಕೆ ತೆರಳಿದ್ದು, ಅಲ್ಲಿನ ಉಪ ಕಾರಾಗೃಹದಲ್ಲಿರುವ ಸಮೀರ ಗಾಯಕವಾಡನನ್ನು ವಿಚಾರಣೆ ಮಾಡಲು ಅವಕಾಶ ಕೊಡಿ ಎಂದು ಅರ್ಜಿ ಸಲ್ಲಿಸಿದೆ.

ಡಾ. ಎಂ.ಎಂ. ಕಲಬುರ್ಗಿ ಹಂತಕ ಯಾರು? ಏಕೆ ಕೊಲೆ ಮಾಡಿದ? ಆತ ಸಿಗುತ್ತಾನೋ? ಮಹಾರಾಷ್ಟ್ರದ ಚಿಂತಕ ಗೋವಿಂದ ಪಾನ್ಸರೆ ಅವರನ್ನು ಕೊಂದವರೇ ಕಲಬುರ್ಗಿ ಅವರಿಗೂ ಗುಂಡಿಟ್ಟರೇ? ಅಥವಾ ಬೇರೆ ಯಾರಾದರೂ ಕೊಲೆ ಮಾಡಿದರೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಒಂದು ತಿಂಗಳಾದರೂ ಉತ್ತರ ಸಿಕ್ಕಿಲ್ಲ. ಈ ಸಂಗತಿ ಈಗ ಕಲಬುರ್ಗಿ ಕುಟುಂಬ ಹಾಗೂ ಸಾಹಿತ್ಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT