ಅನ್ನದಾನಯ್ಯ ಪುರಾಣಿಕ್ 
ಜಿಲ್ಲಾ ಸುದ್ದಿ

ಅನ್ನದಾನಯ್ಯ ಪುರಾಣಿಕ್ ಸ್ಥಿತಿ ಚಿಂತಾಜನಕ: ಸರ್ಕಾರ, ಕಸಾಪದಿಂದ ಕಡೆಗಣನೆ

ಹಿರಿಯ ಸಾಹಿತಿ ಅನ್ನದಾನಯ್ಯ ಪುರಾಣಿಕ್(87 ) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬನಶಂಕರಿಯ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಹಿರಿಯ ಸಾಹಿತಿ ಅನ್ನದಾನಯ್ಯ ಪುರಾಣಿಕ್(87 ) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬನಶಂಕರಿಯ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ 10 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸರ್ಕಾರದ ಪ್ರತಿನಿಧಿಗಳು ಮತ್ತು ಸಾಹಿತ್ಯ ಪರಿಷತ್ ನ ಅಧ್ಯಕ್ಷರು ಭೇಟಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಪುರಾಣಿಕ್ ಅವರು ಗಾಂಧಿಜಿ ಆರಂಭಿಸಿದ ಕ್ವಿಟ್ ಇಂಡಿಯಾ ಚಳವಳಿಯಿಂದ ಹಿಡಿದು ಕರ್ನಾಟಕ ಏಕೀಕರಣ, ಹೈದರಾಬಾದ್ ಕರ್ನಾಟಕ ವಿಮೋಚನೆ ಚಳುವಳಿವರೆಗೂ ಹೋರಾಟದ ನೇತೃತ್ವ ವಹಿಸಿಕೊಂಡಿದ್ದರು.
1957 ರಲ್ಲಿ ಅಖಿಲ ಕರ್ನಾಟಕ ಪರಿಷತ್ ಸ್ಥಾಪಿಸಿದ್ದರು. ಇದರೊಂದಿಗೆ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಸ್ಥಾನ ವಹಿಸಿಕೊಂಡು ಸರ್ಕಾರದಿಂದ ಬರುತ್ತಿದ್ದ ಅನುದಾನವನ್ನು 1 ಲಕ್ಷ ರೂಪಾಯಿಗೆ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಪರಿಷತ್ ಮುದ್ರಣಾಲಯ ಸ್ಥಾಪನೆ, ಗಡಿನಾಡು ಸಾಹಿತ್ಯ ಸಮ್ಮೇಳನದ ಮೂಲಕ ಪುರಾಣಿಕ್ ಮನೆಮಾತಾಗಿದ್ದರು. 30 ಕ್ಕೂ ಹೆಚ್ಚು ಪುಸ್ತಕ ಬರೆದು ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಪುರಾಣಿಕ್ ಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!