ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಳ್ಳಾರಿಯಲ್ಲಿ ಉದ್ಯಮಿ ಕಿಡ್ನಾಪ್, ಪರಿಚಿತರೇ ಮಾಡಿರುವ ಶಂಕೆ

ಆಟೋ ಮೊಬೈಲ್ ಉದ್ಯಮಿ ಪಿ.ಗಣೇಶ್‌ ಎಂಬುವರನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್ ಮಾಡಿದ ತಂಡದ ಓರ್ವ ಸದಸ್ಯ ಸ್ಥಳೀಯರ ಕೈಗೆ ...

ಬಳ್ಳಾರಿ: ಆಟೋ ಮೊಬೈಲ್ ಉದ್ಯಮಿ ಪಿ.ಗಣೇಶ್‌ ಎಂಬುವರನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್ ಮಾಡಿದ ತಂಡದ ಓರ್ವ ಸದಸ್ಯ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ನಗರದಲ್ಲಿನ ಲಾರಿ ಟರ್ಮಿನಲ್‌ನಲ್ಲಿ ರೋಹಿತ್ ಆಟೋಮೊಬೈಲ್ ಶಾಪ್ ಇಟ್ಟುಕೊಂಡಿರುವ ಗಣೇಶ್, ಅವರ ಸಹೋದರಿ ವಿಜಯಲಕ್ಷ್ಮಿ ಪತಿ ಶ್ರೀಹರಿ ಕರ್ನೂಲ್‌ನ ಕೃಷ್ಣರಾಯಲು ಎಂಬುವನ ಬಳಿ ೩೦ ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆತ ಸಾವನ್ನಪ್ಪಿದ್ದು, ವಿಜಯಲಕ್ಷ್ಮಿ ಸಹೋದರ ಗಣೇಶ್‌ನಿಗೆ ಹಣ ನೀಡುವಂತೆ ಒತ್ತಡ ಹೇರಲಾಗಿತ್ತು. ನಿನ್ನೆ ರಾತ್ರಿ ಗಣೇಶ್‌  ಅಂಗಡಿ ಬಂದ್ ಮಾಡಿ ಮನೆಗೆ ಹೋಗುವಾಗ ಆರು ಜನರ ತಂಡ ಅವರನ್ನು ಕಿಡ್ನಾಪ್ ಮಾಡಿತ್ತು.

ತಮಗೆ ಜೀವಭಯವಿದ್ದು ರಕ್ಷಣೆ ನೀಡುವಂತೆ ಕೋರಿ  ಮೂರುವರೆ ತಿಂಗಳ ಹಿಂದೆ ಗಾಂಧಿನಗರ ಠಾಣೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.  ಈಗ ಕಿಡ್ನಾಪ್ ಆಗಿದೆ. ಅಪಹರಣಕಾರರನ್ನು ಪತ್ತೆ ಹಚ್ಚಿ ಎಂದು ಎಸ್ಪಿಗೆ ಕಿಡ್ನಾಪ್‌ ಆದ ಗಣೇಶ್‌ ಅವರ ಪತ್ನಿ ಕಮಲ ಮನವಿ ಮಾಡಿದ್ದಾರೆ.  ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT