ದೇವೇಗೌಡರ ವಿರುದ್ಧ ಟೌನ್ ಹಾಲ್ ನಲ್ಲಿ ಪ್ರತಿಭಟನೆ ನಡೆಸಿದ ಮೌಲ್ವಿಗಳು 
ಜಿಲ್ಲಾ ಸುದ್ದಿ

ದೇವೇಗೌಡರು ಕ್ಷಮೆಯಾಚಿಸಲಿ: ಟೌನ್ ಹಾಲ್ ಬಳಿ ರಸ್ತೆ ತಡೆದು ಮೌಲ್ವಿಗಳಿಂದ ಆಕ್ರೋಶ

ಪಕ್ಷದ ಶಾಸಕ ಜಮೀರ್‌ ಅಹಮ್ಮದ್‌ ಮೀರ್‌ ಸಾದಿಕ್‌ ವರ್ಗಕ್ಕೆ ಸೇರಿದವರಾಗಿದ್ದಾರೆಂದು ಹೇಳಿಕೆ ನೀಡಿದ...

ಬೆಂಗಳೂರು: ಪಕ್ಷದ ಶಾಸಕ ಜಮೀರ್‌ ಅಹಮ್ಮದ್‌ ಮೀರ್‌ ಸಾದಿಕ್‌ ವರ್ಗಕ್ಕೆ ಸೇರಿದವರಾಗಿದ್ದಾರೆಂದು ಹೇಳಿಕೆ ನೀಡಿದ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಮಂಗಳವಾರ ಬೆಂಗಳೂರಿನ ಪುರಭವನದ ಬಳಿ ಮೌಲ್ವಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಜಮೀರ್‌ ಅಹಮ್ಮದ್‌ ಮೀರ್‌ ಸಾದಿಕ್‌ ವರ್ಗಕ್ಕೆ ಸೇರಿದವರಾಗಿದ್ದು, ಅಕ್ರಮವಾಗಿ ಹಣ ಸಂಪಾದಿಸಿ ಜನರನ್ನು ಮೆಕ್ಕಾಗೆ ಕಳುಹಿಸಿದರೆ ದೇವರು ಅವರನ್ನು ಕ್ಷಮಿಸುವುದಿಲ್ಲ ಎಂದು ದೇವೇಗೌಡರು ಕಿಡಿಕಾರಿದ್ದರು. ಈ ಹಿನ್ನಲೆಯಲ್ಲಿ ದೇವೇಗೌಡರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮೌಲ್ವಿಗಳು, ಗೌಡರು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜಾಮೀಯಾ ಮಸೀದಿಯ ಮೌಲ್ವಿ ಮೌಲಾನಾ ಮಕ್ಸೂದ್ ಇಮ್ರಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಹೆಚ್ ಡಿ ದೇವೇಗೌಡರು ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಘೋಷಣೆ ಕೂಗುತ್ತಾ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 
ಹೆಬ್ಟಾಳ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಆರ್‌.ಟಿ.ನಗರದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಜಮೀರ್‌ ಅಹಮ್ಮದ್‌ ವಿರುದ್ಧ ವಾಗ್ಧಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT