ಹನುಮಂತಪ್ಪ ಕೊಪ್ಪದ 
ಜಿಲ್ಲಾ ಸುದ್ದಿ

ವೀರ ಯೋಧ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ

ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್‌‌

ಹುಬ್ಬಳ್ಳಿ: ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್‌‌ ನೀಡಿದ್ದಾರೆ.

ದೆಹಲಿಯ ಆರ್ಮಿ ಆರ್‌ಆರ್‌‌ ಆಸ್ಪತ್ರೆಯಲ್ಲಿ ಹನುಮಂತಪ್ಪ ಕೊಪ್ಪದ ನಿಧನರಾದ ಬಳಿಕ ಅವರ ಪಾರ್ಥಿವ ಶರೀರವನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಕೊಪ್ಪದ ಅವರಿಗೆ ಅಂತಿಮ ನಮನ ಸಲ್ಲಿಸಿದ್ದ ಸಿಎಂ ಬಳಿಕ ಮತ್ತೊಮ್ಮೆ ಕಿಮ್ಸ್‌‌ ಆಸ್ಪತ್ರೆಯಲ್ಲಿ ಅಂತಿಮ ದರ್ಶನ ಪಡೆದರು. ಬಳಿಕ ಕೊಪ್ಪದ ಅವರ ಕುಟುಂಬ ಸದಸ್ಯರಿಗೆ 25 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

ಚೆಕ್‌ ವಿತರಿಸಿ ಮಾತನಾಡಿದ ಅವರು, ಕೊಪ್ಪದ ಅವರ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಇಡಲಾಗುವುದು. ಇನ್ನಿಬ್ಬರು ಹುತಾತ್ಮ ಯೋಧರ ಕುಟುಂಬಕ್ಕೂ 25 ಲಕ್ಷ ರೂಪಾಯಿ ಮೊತ್ತದ ಚೆಕ್, 4 ಎಕರೆ ಜಮೀನು, 1 ನಿವೇಶನ, ಯೋಧರ ಪತ್ನಿಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಹನುಮಂತಪ್ಪ ಕೊಪ್ಪದ್‌ ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ರಿಂದ 10 ಗಂಟೆಯವರೆಗೂ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT