ಅನುಪಮಾ ಶೆಣೈ 
ಜಿಲ್ಲಾ ಸುದ್ದಿ

ಮತ್ತೆ ಕೂಡ್ಲಿಗಿಯಲ್ಲಿ ಡಿವೈಎಸ್ಪಿ ಅನುಪಮಾ ಶೆಣೈ ಅಧಿಕಾರ ಸ್ವೀಕಾರ

ಡಿವೈಎಸ್ಪಿ ಅನುಪಮಾ ಶೆಣೈ ಅವರು ಸರ್ಕಾರದ ಆದೇಶದ ಮೇರೆಗೆ ಮತ್ತೆ ಕೂಡ್ಲಿಗಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಗುರುವಾರ ಅಧಿಕಾರ ವಹಿಸಿಕೊಂಡರು....

ಕೂಡ್ಲಿಗಿ:  ಡಿವೈಎಸ್ಪಿ ಅನುಪಮಾ ಶೆಣೈ ಅವರು ಸರ್ಕಾರದ ಆದೇಶದ ಮೇರೆಗೆ ಮತ್ತೆ ಕೂಡ್ಲಿಗಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಗುರುವಾರ ಅಧಿಕಾರ ವಹಿಸಿಕೊಂಡರು.

ಕೂಡ್ಲಿಗಿ ವಿಭಾಗದಲ್ಲಿ ಇದುವರೆಗೆ ನಡೆದ ಹಾಗೂ ಸದ್ಯ ಆಗಬೇಕಾದ ಕೆಲಸಗಳ ಬಗ್ಗೆ ಅವರು ಪರಿಶೀಲಿಸಿದರು. ನಾನಾ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಅಭಿಮಾನಿಗಳು ಅವರನ್ನು ಕಾಣಲು, ಠಾಣೆ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅವರ ವರ್ಗಾವಣೆ ಖಂಡಿಸಿ ಬಳ್ಳಾರಿ ಜಿಲ್ಲೆ ಸೇರಿ ಇತರೆಡೆ ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ, ರಾಜ್ಯ ಸರಕಾರ ಅವರ ವರ್ಗಾವಣೆ ಆದೇಶ ಹಿಂಪಡೆದಿತ್ತು.

ಡಿವೈಎಸ್ಪಿ ಅನುಪಮಾ ಶೆಣೈ ಅವರು, ಕೂಡ್ಲಿಗಿ ವಿಭಾಗದಲ್ಲಿ ಮತ್ತೊಮ್ಮೆ ಕರ್ತವ್ಯ ನಿರ್ವಹಿಸಲು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಪಟ್ಟಣದ ನಾನಾ ಸಂಘಟನೆಗಳ ಕಾರ್ಯಕರ್ತರು, ಅಭಿಮಾನಿಗಳು ಡಾ.ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನನ್ನ ಆರೋಗ್ಯದಲ್ಲಿ ಒಂದಿಷ್ಟು ವ್ಯತ್ಯಾಸವಾಗಿದ್ದರಿಂದ ಈವರೆಗೂ ನಾನು ರಜೆಯ ಮೇಲಿದ್ದೆ. ಈಗ ಸರಕಾರ ಕೂಡ್ಲಿಗಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಕಳಿಸಿದ್ದರಿಂದ ಗುರುವಾರ ಅಧಿಕಾರ ವಹಿಸಿಕೊಂಡಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT