ತ್ರಿಶಾ 
ಜಿಲ್ಲಾ ಸುದ್ದಿ

ಬೆಂಗಳೂರು: ಆಟವಾಡಲು ಹೋದ 3 ವರ್ಷದ ಮಗು ಶವವಾಗಿ ಪತ್ತೆ

ಆಟವಾಡಲು ಹೋದ ಮಗುವೊಂದು ಶವವಾಗಿ ಪತ್ತೆಯಾಗಿರುವ ಘಟನೆ ನಗರದ ಆರ್ ಟಿ ನಗರದಲ್ಲಿರುವ ಗೋಪಾಲಪ್ಪ ಪಾಳ್ಯದಲ್ಲಿ ನಡೆದಿದೆ....

ಬೆಂಗಳೂರು:  ಆಟವಾಡಲು ಹೋದ ಮಗುವೊಂದು ಶವವಾಗಿ ಪತ್ತೆಯಾಗಿರುವ ಘಟನೆ ನಗರದ ಆರ್ ಟಿ ನಗರದಲ್ಲಿರುವ ಗೋಪಾಲಪ್ಪ ಪಾಳ್ಯದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ವಿಜಯ್ ಮಮತ್ತು ಸೀಮಾ ಇತ್ತೀಚೆಗಷ್ಟೇ ಗೋಪಾಲಪ್ಪ ಪಾಳ್ಯದ ಮನೆಗೆ ಶಿಫ್ಟ್ ಆಗಿದ್ದರು. ಗುರುವಾರ ಬೆಳಗ್ಗೆ ಈ ದಂಪತಿಯ ಮೂರು ವರ್ಷದ ಮಗು ತ್ರಿಷಾ ಮನೆಯ ಮುಂದೆ ಆಟವಾಡಲು ಹೋಗಿತ್ತು. ಆದರೆ ಸಂಜೆ ಆದರೂ ವಾಪಸ್ ಆಗಿರಲಿಲ್ಲ. ತಾಯಿ ಎಲ್ಲೆಡೆ ಹುಡುಕಾಡಿದರು ಮಗು ಸಿಗಲಿಲ್ಲ.

ಬ್ರಿಗೇಡ್ ರೋಡ್ ನ ಹೊಟೇಲ್ ವೊಂದರಲ್ಲಿ ಅಡುಗೆ ಕೆಲಸ ಮಾಡುವ ವಿಜಯ್ ಕೆಲಸ ಮುಗಿಸಿ ತಡರಾತ್ರಿ ಮನೆಗೆ ಬಂದಿದ್ದಾರೆ. ನಂತರ ದಂಪತಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಮೇರೆಗೆ ಪೊಲೀಸರು ಮಗುವಿಗಾಗಿ ಹುಡಾಕಾಟ ನಡೆಸಿದಾಗ ದಂಪತಿಯ ಮನೆಯ ಪಕ್ಕದಲ್ಲೇ ಇದ್ದ ಕಸದ ರಾಶಿಯಲ್ಲಿ ಮಗು ಶವವಾಗಿ ಪತ್ತೆಯಾಗಿದೆ. ಮಗು ಉಸಿರು ಕಟ್ಟಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT