ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

4 ಸಾವಿರ ಇಂಗ್ಲಿಷ್‌ ಶಿಕ್ಷಕರ ಭವಿಷ್ಯ ಅತಂತ್ರ?

ಡಿಗ್ರಿಯಲ್ಲಿ ಇಂಗ್ಲಿಷ್ ಸಾಹಿತ್ಯ ವಿಷಯವನ್ನು ಅಧ್ಯಯನ ಮಾಡಿದವರು ಮಾತ್ರ ಹೈಸ್ಕೂಲ್ ಇಂಗ್ಲಿಷ್‌ ಶಿಕ್ಷಕರಾಗಲು ಅರ್ಹರು ಎಂಬ ಹೈಕೋರ್ಟ್‌...

ಬೆಂಗಳೂರು: ಡಿಗ್ರಿಯಲ್ಲಿ ಇಂಗ್ಲಿಷ್ ಸಾಹಿತ್ಯ ವಿಷಯವನ್ನು ಅಧ್ಯಯನ ಮಾಡಿದವರು ಮಾತ್ರ  ಹೈಸ್ಕೂಲ್ ಇಂಗ್ಲಿಷ್‌ ಶಿಕ್ಷಕರಾಗಲು ಅರ್ಹರು ಎಂಬ ಹೈಕೋರ್ಟ್‌ ಆದೇಶದಿಂದಾಗಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಸುಮಾರು 4 ಸಾವಿರ ಸಹಾಯಕ ಶಿಕ್ಷಕರ ಪರಿಸ್ಥಿತಿ ಅತಂತ್ರವಾಗಿದೆ. 1993-94ರಲ್ಲಿ ಡಿಪ್ಲೊಮಾ ಕೋರ್ಸ್ ನ್ನು ಮಾಡಿ ನೇಮಕಗೊಂಡ ಶಿಕ್ಷಕರನ್ನು ತೆಗೆದುಹಾಕುವಂತೆ ರಾಜ್ಯ ಸರ್ಕಾರ ಇತ್ತೀಚೆಗೆ ಕಳೆದ ವರ್ಷ ಆದೇಶ ನೀಡಿತ್ತು.

ಕಳೆದ ವರ್ಷ ಜುಲೈ 30ರಂದು ಹೈಕೋರ್ಟ್ ಮತ್ತು ಧಾರವಾಡ ವಿಭಾಗೀಯ ಪೀಠ ಆದೇಶವೊಂದನ್ನು ಜಾರಿಗೆ ತಂದಿತ್ತು. ಅದು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳ ನಿಯಮ 2002ರಲ್ಲಿ ಡಿಪ್ಲೊಮಾ ಪದವೀಧರರನ್ನು ಶಿಕ್ಷಕರಾಗಿ ನೇಮಿಸಿಕೊಳ್ಳಲು ಜಾರಿಗೆ ತಂದಿದ್ದ ಆದೇಶವನ್ನು ರದ್ದುಗೊಳಿಸಿತ್ತು. ಇಂಗ್ಲಿಷ್ ಭಾಷಾ ಶಿಕ್ಷಕರಾಗಲು ಇಂಗ್ಲಿಷ್ ಸಾಹಿತ್ಯವನ್ನು ಕಡ್ಡಾಯವಾಗಿ ಓದಿರಬೇಕೆಂದು ಅದು ಹೇಳಿದೆ.

ಈ ನಿಟ್ಟಿನಲ್ಲಿ ಒಂಬತ್ತು ತಿಂಗಳ ಕೋರ್ಸ್‌ ಮುಗಿಸಿ ಆಂಗ್ಲ ಶಿಕ್ಷಕರಾಗಿ ನೇಮಕಗೊಂಡವರಿಗೆ ಮೇಜರ್‌ ಇಂಗ್ಲಿಷ್‌ ಕೋರ್ಸ್‌ ಪೂರ್ಣಗೊಳಿಸಲು ಅವಕಾಶ ನೀಡಲು ಮುಂದಾಗಿರುವ ಸರ್ಕಾರ, ಇದಕ್ಕಾಗಿ ಶಿಕ್ಷಕರಿಗೆ ಮೂರು ಅಥವಾ ನಾಲ್ಕು ವರ್ಷ ಕಾಲಾವಕಾಶ ನೀಡುವ ಬಗ್ಗೆ ನಿಯಮಾವಳಿ ರೂಪಿಸಲು ಚಿಂತನೆ ನಡೆಸಿದೆ.

ವಿಧಾನಸೌಧದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಇಲಾಖೆಯ ಹಿರಿಯ ಅಧಿಕಾರಿಗಳು, ವಕೀಲರೊಂದಿಗೆ ಚರ್ಚಿಸಿದ ಬಳಿಕ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಒಂಬತ್ತು ತಿಂಗಳ ಕೋರ್ಸ್‌ ಮುಗಿಸಿ ಈಗಾಗಲೇ ನೇಮಕಗೊಂಡಿರುವ ಸುಮಾರು ನಾಲ್ಕು ಸಾವಿರ ಇಂಗ್ಲಿಷ್‌ ಶಿಕ್ಷಕರ ಕುರಿತು ಹೈಕೋರ್ಟ್‌ ಆದೇಶದಂತೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದ್ದು, ಇಲ್ಲದಿದ್ದರೆ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾಗುತ್ತದೆ. ಆದರೆ, ಶಿಕ್ಷಕರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT