ಹೆಲಿ ಟೂರಿಸಂ ಭಾಗವಾಗಿ ಹೆಲಿಕಾಪ್ಟರ್ ಮೂಲಕ ಹಾರಾಟ ನಡೆಸಿದಾಗ ಮಲ್ಪೆ ಮೀನುಗಾರಿಕೆ ಬಂದರು ಮತ್ತು ಉದ್ಯಾವರ ಸೇತುವೆ ಕಂಡುಬಂದ ಬಗೆ 
ಜಿಲ್ಲಾ ಸುದ್ದಿ

ರಾಜ್ಯದ ಮೊದಲ ಹೆಲಿ ಟೂರಿಸಂಗೆ ಉಡುಪಿಯಲ್ಲಿ ಚಾಲನೆ

ರಾಜ್ಯದಲ್ಲಿ ಮೊದಲ ಹೆಲಿಕಾಪ್ಟರ್ ಮೂಲಕ ಪ್ರವಾಸೋದ್ಯಮಕ್ಕೆ(ಹೆಲಿ ಟೂರಿಸಂ) ಉಡುಪಿ ಜಿಲ್ಲೆಯಲ್ಲಿ ನಿನ್ನೆ ಚಾಲನೆ...

ಉಡುಪಿ: ರಾಜ್ಯದಲ್ಲಿ ಮೊದಲ ಹೆಲಿಕಾಪ್ಟರ್ ಮೂಲಕ ಪ್ರವಾಸೋದ್ಯಮಕ್ಕೆ(ಹೆಲಿ ಟೂರಿಸಂ) ಉಡುಪಿ ಜಿಲ್ಲೆಯಲ್ಲಿ ನಿನ್ನೆ ಚಾಲನೆ ನೀಡಲಾಯಿತು. ದೆಹಲಿ ಮೂಲದ ಚಿಪ್ಸನ್ ಏವಿಯೇಷನ್ ಕಂಪೆನಿ ಉಡುಪಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಈ ಸೇವೆ ಆರಂಭಿಸಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ಇಲ್ಲಿನ ಪ್ರಾಕೃತಿಕ, ಐತಿಹಾಸಿಕ, ಪಾರಿಸರಿಕ ಸ್ಥಳಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ರಾಜ್ಯವನ್ನು ದೇಶದಲ್ಲಿ ಗುರುತಿಸುವಂತೆ ಮಾಡಿದೆ. ಕರ್ನಾಟಕದ ಸಮುದ್ರ ತೀರದಲ್ಲಿ ಮತ್ತು ಪಶ್ಚಿಮ ಘಟ್ಟದಲ್ಲಿ ಸಾಹಸ ಪ್ರವಾಸೋದ್ಯಮದ ಅಭಿವೃದ್ಧಿಗೆ, ಹೊರ ರಾಜ್ಯದ ಮತ್ತು ವಿದೇಶಿ ವಿದ್ಯಾರ್ಥಿಗಳಿಂದ ವ್ಯಾವಹಾರಿಕ ಉದ್ದೇಶಕ್ಕೆ ಮತ್ತು ಮನರಂಜನೆಗಾಗಿ ಹೆಲಿ ಟೂರಿಸಂನ್ನು ಬಳಸಲಾಗಿದೆ ಎಂದು ಉಡುಪಿ ಡಿಸಿ ಡಾ.ಆರ್.ವಿಶಾಲ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗಳಲ್ಲಿನ ಪ್ರಸಿದ್ಧ ದೇವಾಲಯಗಳಾದ ಕೊಲ್ಲೂರು ಮೂಕಾಂಬಿಕೆ, ಉಡುಪಿ ಕೃಷ್ಣ ಮಠ, ಮಣಿಪಾಲಕ್ಕೆ ಬರುವ ಕೆಲವು ಹೆಲಿಕ್ಯಾಪ್ಟರ್ ಇಳಿಸಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಹೆಲಿ ಟೂರಿಸಂಗೆ ಒಳ್ಳೆಯ ಅವಕಾಶವಿದೆ ಎಂದು ಅವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT