ಸರ್ವಜ್ಞ 
ಜಿಲ್ಲಾ ಸುದ್ದಿ

ರಾಜ್ಯದೆಲ್ಲೆಡೆ ದಾರ್ಶನಿಕ ಕವಿ ಸರ್ವಜ್ಞ ಜಯಂತಿ ಆಚರಣೆ

16ನೇ ಶತಮಾನದಲ್ಲಿ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ವಚನಕಾರ, ದಾರ್ಶನಿಕ ಕವಿ ಸರ್ವಜ್ಞನ ಜಯಂತಿ ಆಚರಣೆ ಮಾಡಲಾಗುತ್ತಿದೆ.

"ಜಾತಿಹೀನನ ಮನೆಯ ಜ್ಯೋತಿ ತಾ ಹೀನವೆ ಜಾತಿ ವಿಜಾತಿ ಎನಬೇಡ ಶಿವನೊಲಿದಾತನೆ ಜಾತ ಸರ್ವಜ್ಞ"
"ಸರ್ವಜ್ಞ ನೆಂಬುವನು ಗರ್ವದಿಂದಾದವನೆ ಸರ್ವರೊಳಗೊಂದು ನುಡಿಗಲಿತು ವಿದ್ಯೆಯಾ ಪರ್ವತವೇ ಆದ ಸರ್ವಜ್ಞ"
"ಹರನೆಂಬ ದೈವ ನಮಗುಂಟು, ತಿರಿವರಿಂ ಸಿರಿವಂತರಾರು ಸರ್ವಜ್ಞ"
"ಮಂಡೆ ಬೋಳಿಸಿಕೊಂಡು ತುಂಡುಗಂಬಳಿ ಹೊದೆದು ಹಿಂಡನಗಲಿದ ಗಜದಂತೆ ಇಪ್ಪವನ ಕಂಡು ನಂಬುವುದು ಸರ್ವಜ್ಞ"

16ನೇ ಶತಮಾನದಲ್ಲಿ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ವಚನಕಾರ, ದಾರ್ಶನಿಕ ಕವಿ ಸರ್ವಜ್ಞನ ಜಯಂತಿ ಆಚರಣೆ ಮಾಡಲಾಗುತ್ತಿದೆ.

ಹಾವೇರಿ ಜಿಲ್ಲೆಯ ಅಬಲೂರು ಸರ್ವಜ್ಞನ ಜನ್ಮಸ್ಥಳ. ಜನರ ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ಚಿಕಿತ್ಸಕ ನೋಟದೊಂದಿಗೆ ತಿದ್ದಿದ ಸಮಾಜ ಸುಧಾರಕ.

ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದೆ. ತ್ರಿಪದಿಗಳು ಸಾರುವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ. ಇವುಗಳು ಹಲವು ಭಾಷೆಗಳಿಗೆ ಭಾಷಾಂತರಗೊಂಡಿದ್ದು, ಭಾಷೆ ಮತ್ತು ಗಡಿಗಳ ಎಲ್ಲೆ ಮೀರಿ ಕರ್ನಾಟಕದ ಕೀರ್ತಿಯನ್ನು ಬೆಳಗಿಸಿವೆ.

ಇಂದು ರಾಜ್ಯದೆಲ್ಲಡೆ ಸರ್ವಜ್ಞನ ಜನ್ಮದಿನಾಚರಣೆಯನ್ನು ಆಚರಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜೆಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ವಜ್ಞ ಜಯಂತಿ ಆಚರಣೆ ಹಮ್ಮಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

'ಬಿಜೆಪಿಗರ ಎದೆ ಸೀಳಿದರೆ ಭ್ರಷ್ಟಾಚಾರ ಮಾತ್ರ ಕಾಣುತ್ತದೆ; KPSC ಅಧ್ಯಕ್ಷ ಯಡಿಯೂರಪ್ಪ ಸಂಬಂಧಿ; ಇದನ್ನು ಹೇಳಿದ್ದು ಯತ್ನಾಳ್'

ಪ್ರಿಯಾಂಕಾ ಗಾಂಧಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿ ಕಾಮಕೋಟಿಯನ್ನು 'ಗೋಮುತ್ರ ತಜ್ಞ' ಎಂದು ಟೀಕಿಸಿದ್ದು ಏಕೆ ಗೊತ್ತಾ?

ಮೃತಪಟ್ಟ 1 ವರ್ಷದ ಬಳಿಕ ಮಾಜಿ ಪ್ರಧಾನಿ ಸಿಂಗ್ ಗೆ ಕೋರ್ಟ್ ನಲ್ಲಿ ಬಿಗ್ ರಿಲೀಫ್; ಖುಲಾಸೆ!