ಸಿಎಂ ಕಡೆಗೆ ಕವರ್ ಎಸೆದ ಪ್ರಸಾದ್-ಸಿಎಂ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಬಾಂಬ್ ಇದೆ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಕಡೆಗೆ ಕವರ್ ಎಸೆದ ಅಪರಿಚಿತ

ಬಾಂಬ್ ಇದೆ ಎಂದು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಡೆಗೆ ವಸ್ತುವೊಂದನ್ನು ಎಸೆದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು...

ಬೆಂಗಳೂರು: ಬಾಂಬ್ ಇದೆ ಎಂದು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಡೆಗೆ ವಸ್ತುವೊಂದನ್ನು ಎಸೆದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿಗಳು ಭಾಷಣ ಮಾಡುತ್ತಿದ್ದ ವೇಳೆ, ಇದು ಬಾಂಬ್ ಎಂದು ಹೇಳಿ, ಕೈಯಲ್ಲಿದ್ದ ಕವರೊಂದನ್ನು ಸಿಎಂ ಕಡೆಗೆ ಎಸೆದಿದ್ದಾನೆ.
ತಕ್ಷಣ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸವಿತಾ ಸಮಾಜದ ಬಿ ಹೆಚ್ ಪ್ರಸಾದ್ ಎಂದು ತಿಳಿದು ಬಂದಿದೆ. ಬಾಲ್ಕಾನಿಯಲ್ಲಿ ನಿಂತು ನಮ್ಮ ಸಮಾಜಕ್ಕೆ ನೀವು ಏನು ಮಾಡಿದ್ದೀರಿ ಎಂದು ಹೇಳಿ, ಆಮೇಲೆ ನೀವು ಮಾತಾಡಿ ಎಂದು ಕಿರುಚಾಡಿದ್ದಾನೆ. ಆದರೆ, ಆತ ಎಸೆದಿದ್ದು, ಬಾಂಬ್ ಅಲ್ಲ. ಅದು ಒಂದು ಚಾಕಲೇಟ್ ಕವರ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ!

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

ಸತತ 2 IPL ಟ್ರೋಫಿ ಗೆಲುವಿನ ಬೆನ್ನಲ್ಲೇ ಗಗನಕ್ಕೇರಿದ RCB ಬ್ರ್ಯಾಂಡ್ ವ್ಯಾಲ್ಯೂ; 4ನೇ ಸ್ಥಾನಕ್ಕೆ ಕುಸಿದ CSK.. ಇಲ್ಲಿದೆ ಫುಲ್ ಲಿಸ್ಟ್

'ಬಿಜೆಪಿಗರ ಎದೆ ಸೀಳಿದರೆ ಭ್ರಷ್ಟಾಚಾರ ಮಾತ್ರ ಕಾಣುತ್ತದೆ; KPSC ಅಧ್ಯಕ್ಷ ಯಡಿಯೂರಪ್ಪ ಸಂಬಂಧಿ; ಇದನ್ನು ಹೇಳಿದ್ದು ಯತ್ನಾಳ್'