ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ 
ಜಿಲ್ಲಾ ಸುದ್ದಿ

ಸಿಎಂ ವಾಚ್‌ ನ ಮೂಲದ ಬಗ್ಗೆ ತನಿಖೆ ಮಾಡಿ: ಇ.ಡಿಗೆ ಪ್ರಹ್ಲಾದ್‌ ಜೋಶಿ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದುಬಾರಿ ವಾಚ್‌ ಎಲ್ಲಿಂದ ಸಿಕ್ಕಿತು, ಅದನ್ನು ಉಡುಗೊರೆಯಾಗಿ ನೀಡಿದ್ದವರು ಯಾರು ಎಂಬಿತ್ಯಾದಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದುಬಾರಿ ವಾಚ್‌  ಎಲ್ಲಿಂದ ಸಿಕ್ಕಿತು, ಅದನ್ನು ಉಡುಗೊರೆಯಾಗಿ ನೀಡಿದ್ದವರು ಯಾರು ಎಂಬಿತ್ಯಾದಿ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ದುಬಾರಿ ವಾಚ್‌ ಪ್ರಕರಣವನ್ನು ಬಿಜೆಪಿ ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿದೆ.

ದೆಹಲಿಯ ಜಾರಿ ನಿರ್ದೇಶನಾಲಯ ನಿರ್ದೇಶಕ ಕರ್ನಾಲ್‌ ಸಿಂಗ್‌ ಅವರಿಗೆ ಪತ್ರ ಬರೆದಿರುವ ಜೋಶಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಪಡೆದಿದ್ದರು ಎಂದು ಹೇಳಲಾಗಿರುವ ವಾಚ್‌ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿದ್ದು ತನಿಖೆ ನಡೆಸಿ ಕಾನೂನು ಉಲ್ಲಂಘನೆಯಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ವಾಚ್‌ ಕುರಿತಂತೆ ನಾನಾ ವ್ಯಾಖ್ಯಾನಗಳು ಬರುತ್ತಿರುವುದರಿಂದ ರಾಜ್ಯದ ಜನತೆಯ ಹಿತದೃಷ್ಟಿಯಿಂದಲೂ ವಾಚ್‌ನ ಮೂಲ ಕುರಿತು ಸತ್ಯಾಂಶ ಗೊತ್ತಾಗಬೇಕಿದೆ. ಆದಷ್ಟು ಬೇಗ ಪ್ರಕರಣದ ತನಿಖೆ ನಡೆಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, Video Viral

'ಮಹಾ' ಡಿಸಿಎಂ ಅಜಿತ್ ಪವಾರ್ ದುರಂತ ಸಾವು ಬೆನ್ನಲ್ಲೇ ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAF

SCROLL FOR NEXT