ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೆತ್ತ ಮಕ್ಕಳನ್ನು ಕೊಂದು ಚೀಲ ಕಟ್ಟಿ ಚರಂಡಿಗೆ ಎಸೆದ ಕಟುಕ ತಂದೆ

ಮಕ್ಕಳ ಶಾಲೆಯ ಫೀಸು ಕಟ್ಟಲು ಹಣ ಕೇಳಿದ್ದರಿಂದ ಕೋಪಗೊಂಡ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಚರಂಡಿಗೆ .,..

ಬೆಂಗಳೂರು :ಮಕ್ಕಳ ಶಾಲೆಯ ಫೀಸು ಕಟ್ಟಲು ಹಣ ಕೇಳಿದ್ದರಿಂದ ಕೋಪಗೊಂಡ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಚರಂಡಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಭುವನೇಶ್ವರ ನಗರ ನಿವಾಸಿ ಶಿವಕುಮಾರ್  ತನ್ನ ಮಕ್ಕಳಾದ ಪವನ್ (9), ಸಿಂಚನ (3)ರನ್ನು ಹತ್ಯೆ ಮಾಡಿ ಮೋರಿಗೆಸೆದ ನಿರ್ದಯಿ ತಂದೆ.

ಮಕ್ಕಳು ಮನೆಯಲ್ಲಿ ಕಾಣುತ್ತಿಲ್ಲ ಎಂದು ಪತ್ನಿ ಫೋನ್ ಮಾಡಿದಾಗ, ಮಲೆಮಹದೇಶ್ವರಬೆಟ್ಟದಲ್ಲಿ ಅವರು ತಪ್ಪಿಸಿಕೊಂಡರು ಎಂದು ಸುಳ್ಳು ಹೇಳಿದ್ದ. ಗಂಡನ ವರ್ತನೆಯಿಂದ ಅನುಮಾನಗೊಂಡ ಪತ್ನಿ ಪೊಲೀಸರಿಗೆ ವಿಷಯ ತಿಳಿಸುವುದಾಗಿ ಹೇಳಿದ ನಂತರ ಸತ್ಯವನ್ನು ಹೇಳಿದ್ದ.

ಫೆಬ್ರವರಿ 20ರಂದು ಮಕ್ಕಳಿಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ, ಶವಗಳನ್ನು ಗೋಣಿಚೀಲದಲ್ಲಿ ಕಟ್ಟಿ ಮೋರಿಗೆ ಎಸೆದಿದ್ದ. ನಂತರ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ. ನಂತರ ಪತ್ನಿ ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ.  ಶಿವಕುಮಾರ್‌ನನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಮೋರಿಯಲ್ಲಿ ಹುಡುಕಾಟ ನಡೆಸಿದಾಗ ಮಕ್ಕಳಿಬ್ಬರ ಶವ ಪತ್ತೆಯಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನಾವಿಕರ ಸಾವು: ‘ವಾಣಿಜ್ಯ ಹಡಗುಗಳ ಮೇಲಿನ ದಾಳಿ ನ್ಯಾಯಸಮ್ಮತವಲ್ಲ’; ಅಮೆರಿಕಾಗೆ ಭಾರತ ಖಡಕ್‌ ಸಂದೇಶ, ರಾಜತಾಂತ್ರಿಕ ಸಂಘರ್ಷ ಉಲ್ಬಣ

ಬೆಂಗಳೂರು ಅಭಿವೃದ್ಧಿ ಖಾತೆ ಹಗ್ಗಜಗ್ಗಾಟ: ಅಧಿಕಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ಅಧಿಕಾರ ಸ್ವೀಕಾರ: ಕೃಷ್ಣ ಬೈರೇಗೌಡ

ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆ

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ; 2 ದಿನದಲ್ಲಿ 2,764 ಪಾಸ್ ವಿತರಣೆ

ನಾನು Gay ಅಲ್ಲ, ದಿಶಾ ಪಟಾನಿ ನನ್ನ ಆಪ್ತ ಸ್ನೇಹಿತೆ ಮಾತ್ರ: ಸೋಶಿಯಲ್ ಮೀಡಿಯಾ ಗಾಸಿಪ್‌ಗೆ ನಟಿ ಮೌನಿ ರಾಯ್ ಬ್ರೇಕ್

SCROLL FOR NEXT