ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೆತ್ತ ಮಕ್ಕಳನ್ನು ಕೊಂದು ಚೀಲ ಕಟ್ಟಿ ಚರಂಡಿಗೆ ಎಸೆದ ಕಟುಕ ತಂದೆ

ಮಕ್ಕಳ ಶಾಲೆಯ ಫೀಸು ಕಟ್ಟಲು ಹಣ ಕೇಳಿದ್ದರಿಂದ ಕೋಪಗೊಂಡ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಚರಂಡಿಗೆ .,..

ಬೆಂಗಳೂರು :ಮಕ್ಕಳ ಶಾಲೆಯ ಫೀಸು ಕಟ್ಟಲು ಹಣ ಕೇಳಿದ್ದರಿಂದ ಕೋಪಗೊಂಡ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಚರಂಡಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಭುವನೇಶ್ವರ ನಗರ ನಿವಾಸಿ ಶಿವಕುಮಾರ್  ತನ್ನ ಮಕ್ಕಳಾದ ಪವನ್ (9), ಸಿಂಚನ (3)ರನ್ನು ಹತ್ಯೆ ಮಾಡಿ ಮೋರಿಗೆಸೆದ ನಿರ್ದಯಿ ತಂದೆ.

ಮಕ್ಕಳು ಮನೆಯಲ್ಲಿ ಕಾಣುತ್ತಿಲ್ಲ ಎಂದು ಪತ್ನಿ ಫೋನ್ ಮಾಡಿದಾಗ, ಮಲೆಮಹದೇಶ್ವರಬೆಟ್ಟದಲ್ಲಿ ಅವರು ತಪ್ಪಿಸಿಕೊಂಡರು ಎಂದು ಸುಳ್ಳು ಹೇಳಿದ್ದ. ಗಂಡನ ವರ್ತನೆಯಿಂದ ಅನುಮಾನಗೊಂಡ ಪತ್ನಿ ಪೊಲೀಸರಿಗೆ ವಿಷಯ ತಿಳಿಸುವುದಾಗಿ ಹೇಳಿದ ನಂತರ ಸತ್ಯವನ್ನು ಹೇಳಿದ್ದ.

ಫೆಬ್ರವರಿ 20ರಂದು ಮಕ್ಕಳಿಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ, ಶವಗಳನ್ನು ಗೋಣಿಚೀಲದಲ್ಲಿ ಕಟ್ಟಿ ಮೋರಿಗೆ ಎಸೆದಿದ್ದ. ನಂತರ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ. ನಂತರ ಪತ್ನಿ ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ.  ಶಿವಕುಮಾರ್‌ನನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಮೋರಿಯಲ್ಲಿ ಹುಡುಕಾಟ ನಡೆಸಿದಾಗ ಮಕ್ಕಳಿಬ್ಬರ ಶವ ಪತ್ತೆಯಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

SCROLL FOR NEXT