ಬೆಂಕಿಗೆ ಆಹುತಿಯಾದ ಮನೆಯ ಒಳಭಾಗ 
ಜಿಲ್ಲಾ ಸುದ್ದಿ

ದುಷ್ಕರ್ಮಿಗಳಿಂದ ಮನೆಗೆ ಬೆಂಕಿ: ತಾಯಿ, ಮಗ ಸಜೀವ ದಹನ

ತಡರಾತ್ರಿ ಮನೆಮಂದಿ ಮಲಗಿದ್ದಾಗ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ಪರಿಣಾಮ ತಾಯಿ ಮಗ ಸಜೀವ ದಹನವಾಗಿರುವ ಘಟನೆ...

ಮಾಗಡಿ(ರಾಮನಗರ): ತಡರಾತ್ರಿ ಮನೆಮಂದಿ ಮಲಗಿದ್ದಾಗ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ಪರಿಣಾಮ ತಾಯಿ ಮಗ ಸಜೀವ ದಹನವಾಗಿರುವ ಘಟನೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ನಡೆದಿದೆ.

ಮಂಚನಬೆಲೆ ಗ್ರಾಮದ ವಾಸಿ ಭೋಜೇಗೌಡರ ಪತ್ನಿ ವಿಜಯಲಕ್ಷ್ಮಿ(45) ಮತ್ತು ಪುತ್ರ ಭರತ್(20) ಮೃತಪಟ್ಟ ದುರ್ದೈವಿಗಳು. ಇನ್ನು ಸುಟ್ಟ ಗಾಯಗಳಿಂದ ತೀವ್ರ ಅಸ್ವಸ್ಥಗೊಂಡಿರುವ ಭೋಜೇಗೌಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ ರಾತ್ರಿ ವಿಜಯಲಕ್ಷ್ಮಿ ಮತ್ತು ಅವರ ಪುತ್ರ ಭರತ್ ಮನೆಯ ಹಾಲ್ ನಲ್ಲಿಯೇ ಮಲಗಿದ್ದರು. ದುಷ್ಕರ್ಮಿಗಳು ತಡರಾತ್ರಿ ಮನೆಯ ಎರಡು ಬಾಗಿಲುಗಳು ತೆರೆಯಲು ಸಾಧ್ಯವಾಗದಂತೆ ಹೊರಗಿನಿಂದ ಚಿಲಕಗಳನ್ನು ದಾರದಿಂದ ಬಿಗಿದ್ದಾರೆ. ಆನಂತರ ಕಿಟಿಕಿಯಿಂದ ಮನೆಯೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಹಾಲ್ ನಲ್ಲಿ ದಿವಾನ್ ಮೇಲೆ ಮಲಗಿದ್ದ ಭರತ್ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿಕೊಂಡಿದ್ದಾರೆ. ಆಗ ಹಾಲ್ ನಲ್ಲಿಯೇ ನೆಲದ ಮೇಲೆ ಮಲಗಿದ್ದ ವಿಜಯಲಕ್ಷ್ಮಿ ಹಾಗೂ ಮತ್ತೊಂದು ಕೊಠಡಿಯಲ್ಲಿ ಮಲಗಿದ್ದ ಬೋಜೇಗೌಡರು ಮಗನನ್ನು ರಕ್ಷಿಸಲು ಬಂದಿದ್ದು ಆದರೆ ಪ್ರಯೋಜನವಾಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

SCROLL FOR NEXT