ಬೆಂಕಿಗೆ ಆಹುತಿಯಾದ ಮನೆಯ ಒಳಭಾಗ 
ಜಿಲ್ಲಾ ಸುದ್ದಿ

ದುಷ್ಕರ್ಮಿಗಳಿಂದ ಮನೆಗೆ ಬೆಂಕಿ: ತಾಯಿ, ಮಗ ಸಜೀವ ದಹನ

ತಡರಾತ್ರಿ ಮನೆಮಂದಿ ಮಲಗಿದ್ದಾಗ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ಪರಿಣಾಮ ತಾಯಿ ಮಗ ಸಜೀವ ದಹನವಾಗಿರುವ ಘಟನೆ...

ಮಾಗಡಿ(ರಾಮನಗರ): ತಡರಾತ್ರಿ ಮನೆಮಂದಿ ಮಲಗಿದ್ದಾಗ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ಪರಿಣಾಮ ತಾಯಿ ಮಗ ಸಜೀವ ದಹನವಾಗಿರುವ ಘಟನೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ನಡೆದಿದೆ.

ಮಂಚನಬೆಲೆ ಗ್ರಾಮದ ವಾಸಿ ಭೋಜೇಗೌಡರ ಪತ್ನಿ ವಿಜಯಲಕ್ಷ್ಮಿ(45) ಮತ್ತು ಪುತ್ರ ಭರತ್(20) ಮೃತಪಟ್ಟ ದುರ್ದೈವಿಗಳು. ಇನ್ನು ಸುಟ್ಟ ಗಾಯಗಳಿಂದ ತೀವ್ರ ಅಸ್ವಸ್ಥಗೊಂಡಿರುವ ಭೋಜೇಗೌಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ ರಾತ್ರಿ ವಿಜಯಲಕ್ಷ್ಮಿ ಮತ್ತು ಅವರ ಪುತ್ರ ಭರತ್ ಮನೆಯ ಹಾಲ್ ನಲ್ಲಿಯೇ ಮಲಗಿದ್ದರು. ದುಷ್ಕರ್ಮಿಗಳು ತಡರಾತ್ರಿ ಮನೆಯ ಎರಡು ಬಾಗಿಲುಗಳು ತೆರೆಯಲು ಸಾಧ್ಯವಾಗದಂತೆ ಹೊರಗಿನಿಂದ ಚಿಲಕಗಳನ್ನು ದಾರದಿಂದ ಬಿಗಿದ್ದಾರೆ. ಆನಂತರ ಕಿಟಿಕಿಯಿಂದ ಮನೆಯೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಹಾಲ್ ನಲ್ಲಿ ದಿವಾನ್ ಮೇಲೆ ಮಲಗಿದ್ದ ಭರತ್ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿಕೊಂಡಿದ್ದಾರೆ. ಆಗ ಹಾಲ್ ನಲ್ಲಿಯೇ ನೆಲದ ಮೇಲೆ ಮಲಗಿದ್ದ ವಿಜಯಲಕ್ಷ್ಮಿ ಹಾಗೂ ಮತ್ತೊಂದು ಕೊಠಡಿಯಲ್ಲಿ ಮಲಗಿದ್ದ ಬೋಜೇಗೌಡರು ಮಗನನ್ನು ರಕ್ಷಿಸಲು ಬಂದಿದ್ದು ಆದರೆ ಪ್ರಯೋಜನವಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪರಿಹಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ಜಾತಿ ರಹಿತ ಸಮಾಜ ನಿರ್ಮಾಣವೇ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

ಸಂಚಾರ ದಂಡ ರಿಯಾಯಿತಿಯಿಂದ ಬರೋಬ್ಬರಿ 106 ಕೋಟಿ ಸಂಗ್ರಹ: 37.86 ಲಕ್ಷ ಪ್ರಕರಣ ಇತ್ಯರ್ಥ

AI ವೀಡಿಯೊ ಮೂಲಕ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ತೇಜೋವಧೆ: Congress, ಐಟಿ ಸೆಲ್ ವಿರುದ್ಧ ಎಫ್ಐಆರ್

ಯಾರೂ ಭಾರತ-ಪಾಕ್ ಪಂದ್ಯ ನೋಡಬೇಡಿ, TV ಆಫ್ ಮಾಡಿ: ಪಹಲ್ಗಾಮ್ ಬಲಿಪಶು ಶುಭಂ ದ್ವಿವೇದಿ ಪತ್ನಿ ಕರೆ

SCROLL FOR NEXT