ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ದುರ್ಮರಣ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು-ಮಂಗಳೂರು...

ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ಕುಡೂರಿನ ಅಂಚೆಪಾಳ್ಯದಲ್ಲಿ ಭಾನುವಾರ ರಾತ್ರಿ ಸುಮಾರು 7.45 ರ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕುದುರೆಗೆರೆಯ ನಿವಾಸಿಗಳಾದ ಸರೋಜಮ್ಮ(70), ಅವರ ಪುತ್ರ ರೇಣುಕಪ್ಪಾ(50) ಮತ್ತು ಗಂಗಮ್ಮ(40) ಮೃತಪಟ್ಟಿದ್ದಾರೆ. 
ಟಾಟಾ ಸುಮೋದಲ್ಲಿ 9 ಮಂದಿಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಈ ವೇಳೆ ಊಟ ಮಾಡಲು ರಸ್ತೆ ಬದಿ ಸುಮೋ ನಿಲ್ಲಿಸಿ ಎದುರಿಗೆ ಇದ್ದ ಡಾಬಾಗೆ ತೆರಳುಲು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ, ಅಪಘಾತ ಮಾಡಿದ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸರಬಹುದು ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

'ಬಿಜೆಪಿಗರ ಎದೆ ಸೀಳಿದರೆ ಭ್ರಷ್ಟಾಚಾರ ಮಾತ್ರ ಕಾಣುತ್ತದೆ; KPSC ಅಧ್ಯಕ್ಷ ಯಡಿಯೂರಪ್ಪ ಸಂಬಂಧಿ; ಇದನ್ನು ಹೇಳಿದ್ದು ಯತ್ನಾಳ್'

ಪ್ರಿಯಾಂಕಾ ಗಾಂಧಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿ ಕಾಮಕೋಟಿಯನ್ನು 'ಗೋಮುತ್ರ ತಜ್ಞ' ಎಂದು ಟೀಕಿಸಿದ್ದು ಏಕೆ ಗೊತ್ತಾ?

ಮೃತಪಟ್ಟ 1 ವರ್ಷದ ಬಳಿಕ ಮಾಜಿ ಪ್ರಧಾನಿ ಸಿಂಗ್ ಗೆ ಕೋರ್ಟ್ ನಲ್ಲಿ ಬಿಗ್ ರಿಲೀಫ್; ಖುಲಾಸೆ!