ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ದುರ್ಮರಣ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು-ಮಂಗಳೂರು...

ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ಕುಡೂರಿನ ಅಂಚೆಪಾಳ್ಯದಲ್ಲಿ ಭಾನುವಾರ ರಾತ್ರಿ ಸುಮಾರು 7.45 ರ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕುದುರೆಗೆರೆಯ ನಿವಾಸಿಗಳಾದ ಸರೋಜಮ್ಮ(70), ಅವರ ಪುತ್ರ ರೇಣುಕಪ್ಪಾ(50) ಮತ್ತು ಗಂಗಮ್ಮ(40) ಮೃತಪಟ್ಟಿದ್ದಾರೆ. 
ಟಾಟಾ ಸುಮೋದಲ್ಲಿ 9 ಮಂದಿಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಈ ವೇಳೆ ಊಟ ಮಾಡಲು ರಸ್ತೆ ಬದಿ ಸುಮೋ ನಿಲ್ಲಿಸಿ ಎದುರಿಗೆ ಇದ್ದ ಡಾಬಾಗೆ ತೆರಳುಲು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ, ಅಪಘಾತ ಮಾಡಿದ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸರಬಹುದು ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಎಲ್ಲರಿಗೂ ನ್ಯಾಯ ಒಂದೇ ಅಲ್ಲ: ನಟ ದಿಲೀಪ್ ಖುಲಾಸೆ ಕುರಿತಂತೆ ಬೇಸರ ವ್ಯಕ್ತಪಡಿಸಿದ ಅತ್ಯಾಚಾರ ಸಂತ್ರಸ್ತ ನಟಿ!

3ನೇ ಟಿ20: Team India ಮಾರಕ ಬೌಲಿಂಗ್ ದಾಳಿ; 117 ರನ್‌ಗಳಿಗೆ ದಕ್ಷಿಣ ಆಫ್ರಿಕಾ ಸರ್ಪಪತನ!

ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಎದುರಿಸಿ, ಗೆಲ್ಲಿ ನೋಡೋಣ: ಬಿಜೆಪಿಗೆ ಪ್ರಿಯಾಂಕಾ ಗಾಂಧಿ ಸವಾಲ್!

ಬಿಜೆಪಿಗೆ ಬಿಹಾರದ ಸಚಿವ ಹೊಸ ರಾಷ್ಟ್ರೀಯ ಕಾರ್ಯಾಧ್ಯಕ್ಷ; ಇವರೇನಾ ಮುಂದಿನ ರಾಷ್ಟ್ರಾಧ್ಯಕ್ಷ?

SCROLL FOR NEXT